Webdunia - Bharat's app for daily news and videos

Install App

ನಿಮ್ಮ ಮೆಟ್ರೊ ನೀವೇ ಇಟ್ಕೊಳ್ಳಿ, ನಾವು ಬೈಕ್, ಸೈಕಲ್ ಹತ್ಕೊಂಡು ಹೋಗ್ತೀವಿ

Krishnaveni K
ಭಾನುವಾರ, 9 ಫೆಬ್ರವರಿ 2025 (12:01 IST)
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರವನ್ನು ಏರಿಕೆ ಮಾಡಿರುವುದರ ಬಗ್ಗೆ ಸಾರ್ವಜನಿಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಮೆಟ್ರೊ ನೀವೇ ಇಟ್ಕೊಳ್ಳಿ ನಾವು ಬೈಕ್, ಸೈಕಲ್ ಹತ್ಕೊಂಡು ಹೋಗ್ತೀವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನಿಂದ ಜಾರಿಯಾಗುವಂತೆ ಮೆಟ್ರೊ ಪ್ರಯಾಣ ದರವನ್ನು ಕಿ.ಮೀ. ಅಂತರಕ್ಕೆ ತಕ್ಕಂತೆ ಏರಿಕೆ ಮಾಡಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ರಾಜ್ಯ ರಸ್ತೆ ಸಾರಿಗೆಗಳ ಎಲ್ಲಾ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಮೆಟ್ರೊ ದರವನ್ನೂ ಏರಿಕೆ ಮಾಡಿರುವುದು ದುಡಿಯುವ ವರ್ಗದವರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಎಷ್ಟೋ ಐಟಿ-ಬಿಟಿ ನೌಕರರು, ಇತರೆ ಕಂಪನಿಗಳ ನೌಕರರು ಪ್ರತಿನಿತ್ಯ ಕಚೇರಿಗೆ ತೆರಳಲು ಮೆಟ್ರೊ ರೈಲುಗಳನ್ನು ಆಶ್ರಯಿಸಿದ್ದಾರೆ. ಟ್ರಾಫಿಕ್ ಗೊಂದಲಗಳಿಲ್ಲದೇ ನಿಗದಿತ ಸಮಯಕ್ಕೆ ಕಚೇರಿಗೆ ತೆರಳಲು ಇದು ಸಹಾಯವಾಗುತ್ತಿತ್ತು.

ಆದರೆ ಈಗ ಮೆಟ್ರೊ ಪ್ರಯಾಣ ದರವನ್ನು ವಿಪರೀತ ಏರಿಕೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮ ಬೈಕ್ ಕೂಡಾ ಪ್ರತೀ ಲೀಟರ್ ಗೆ 25-30 ಕಿ.ಮೀ. ಮೈಲೇಜ್ ಕೊಡುತ್ತದೆ. ಹಾಗಿರುವಾಗ ನಮಗೆ ಮೆಟ್ರೊ ಯಾಕೆ ಬೇಕು, ನಾವು ಬೈಕಲ್ಲೋ ಸೈಕಲ್ ನಲ್ಲೋ ಹೋಗ್ತೀವಿ ಬಿಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.  ಮೆಟ್ರೊ ಪ್ರಯಾಣ ದರ ಏರಿಕೆ ಮಾಡಿರುವುದು ಎಷ್ಟು ಹೆಚ್ಚುವರಿ ಹೊರೆ ಬೀಳುತ್ತಿದೆ ಎಂಬುದನ್ನು ಹಲವರು ವಿವರವಾಗಿ ಬರೆದುಕೊಂಡಿದ್ದಾರೆ. ಇದೀಗ ಇದಕ್ಕೆ ಬಿಎಂಆರ್ ಸಿಎಲ್ ಮತ್ತು ಆಡಳಿತದ ಚುಕ್ಕಾಣಿ ಹಿಡಿದವರು ಸ್ಪಂದಿಸುತ್ತಾರಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments