ನಂದಿನಿ ಹಿಟ್ಟು ಸಿಗುತ್ತಿಲ್ಲ ಎಂದು ಜನ, ಸ್ಟಾಕ್ ಬರುತ್ತಿಲ್ಲ ಎಂದು ನಂದಿನಿ ಬೂತ್ ನವರ ಅಳಲು

Krishnaveni K
ಶನಿವಾರ, 4 ಜನವರಿ 2025 (11:31 IST)
ಬೆಂಗಳೂರು: ಇತ್ತೀಚೆಗಷ್ಟೇ ಕೆಎಂಎಫ್ ನಂದಿನಿ ಬ್ರ್ಯಾಂಡ್ ನ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಆದರೆ ಹಿಟ್ಟು ಸಿಗುತ್ತಿಲ್ಲ ಎಂದು ಜನರು, ಸ್ಟಾಕ್ ಬರುತ್ತಿಲ್ಲ ಎಂದು ಕೆಲವು ನಂದಿನಿ ಬೂತ್ ಮಾಲಿಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ನಂದಿನಿ ಗುಣಮಟ್ಟಕ್ಕೆ ಹೆಸರು ವಾಸಿ. ಹೀಗಾಗಿ ನಂದಿನಿ ಬ್ರ್ಯಾಂಡ್ ನ ದೋಸೆ, ಇಡ್ಲಿ ಹಿಟ್ಟು ಬಿಡುಗಡೆಯಾಗುತ್ತದೆ ಎಂಬ ಸುದ್ದಿ ಕೇಳಿಯೇ ಸಾಕಷ್ಟು ಜನ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು. ಅಲ್ಲದೆ ಖರೀದಿಗೆ ಆಸಕ್ತಿ ತೋರಿಸಿದ್ದರು.

ಅದರಂತೆ ಸಿಎಂ ಸಿದ್ದರಾಮಯ್ಯ ಪೌಷ್ಠಿಕಾಂಶಯುಕ್ತ ನಂದಿನಿ ದೋಸೆ ಮತ್ತು ಇಡ್ಲಿ ಹಿಟ್ಟಿನ ಪ್ಯಾಕೆಟ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರು. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಬೆಂಗಳೂರಿನ ಅಧಿಕೃತ ನಂದಿನಿ ಬೂತ್ ಗಳಲ್ಲಿ ಮಾತ್ರವೇ ದೋಸೆ ಮತ್ತು ಇಡ್ಲಿ ಹಿಟ್ಟು ಸಿಗುತ್ತಿದೆ.

ಆದರೆ ಇಷ್ಟಕ್ಕೇ ಜನ ಮುಗಿಬಿದ್ದು ಖರೀದಿಸುತ್ತಿದ್ದಾರೆ. ನಂದಿನಿ ಹಿಟ್ಟಿಗೆ ಭಾರೀ ಬೇಡಿಕೆ ಬಂದಿದ್ದು ಕೆಎಂಎಫ್ ಕೂಡಾ ರಾಜ್ಯ ಇತರೆ ಕೆಲವು ಪ್ರಮುಖ ನಗರಗಳಿಗೂ ವಿಸ್ತರಿಸಲು ತೀರ್ಮಾನಿಸಿದೆ. ಆದರೆ ಬೆಂಗಳೂರಿನಲ್ಲಿ ಬೇಡಿಕೆಯಿದ್ದರೂ ಎಲ್ಲಾ ನಂದಿನಿ ಬೂತ್ ಗಳಲ್ಲಿ ದೋಸೆ, ಇಡ್ಲಿ ಹಿಟ್ಟು ಸಿಗುತ್ತಿಲ್ಲ ಎಂಬ ದೂರು ಗ್ರಾಹಕರಿಂದ ಬಂದಿದೆ. ಕೆಲವು ಪ್ರಮುಖ ಕೇಂದ್ರಗಳಲ್ಲಿ ಮಾತ್ರ ಸೀಮಿತ ಅವಧಿಯಲ್ಲಿ ಮಾತ್ರ ಹಿಟ್ಟು ಮಾರಾಟ ಮಾಡಲಾಗುತ್ತಿದೆ. ಎಲ್ಲಾ ಕೇಂದ್ರಗಳಲ್ಲಿ ಎಲ್ಲಾ ಸಮಯದಲ್ಲೂ ಲಭ್ಯವಾಗುವಂತೆ ಮಾಡಿದರೆ ನಮಗೆ ಅನುಕೂಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಕೆಲವು ನಂದಿನಿ ಬೂತ್ ನವರಿಂದಲೂ ಇದೇ ರೀತಿಯ ಅಳಲು ಕೇಳಿಬರುತ್ತಿದೆ. ಫೋನ್ ಮಾಡುತ್ತಲೇ ಇದ್ದೇವೆ. ನಮಗೆ ಇನ್ನೂ ಸ್ಟಾಕ್ ಬಂದಿಲ್ಲ. ಬಂದರೆ ಚೆನ್ನಾಗಿರುತ್ತದೆ. ಸಾಕಷ್ಟು ಜನ ಬಂದು ಕೇಳ್ತಿದ್ದಾರೆ ಎನ್ನುವ ಅಭಿಪ್ರಾಯ ಬಂದಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನಂದಿನಿ ಹಿಟ್ಟನ್ನು ಇನ್ನಷ್ಟು ಸುಲಭವಾಗಿ ಜನರ ಕೈಗೆಟುಕುವಂತೆ ಮಾಡಲು ಕೆಎಂಎಫ್ ಕ್ರಮ ಕೈಗೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments