Webdunia - Bharat's app for daily news and videos

Install App

ನಂದಿನಿ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ, ಬೆಲೆ ಎಷ್ಟು ಇಲ್ಲಿದೆ ವಿವರ

Krishnaveni K
ಗುರುವಾರ, 26 ಡಿಸೆಂಬರ್ 2024 (09:22 IST)
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಈಗ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ. ನಂದಿನಿ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡಲಾಗಿದೆ. ಇದರ ದರ ಎಷ್ಟು ವಿವರ ಇಲ್ಲಿದೆ.

ನಿನ್ನೆ ಸಿಎಂ ಸಿದ್ದರಾಮಯ್ಯ ನಂದಿನಿ ದೊಸೆ, ಇಡ್ಲಿ ಹಿಟ್ಟಿನ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಂದಿನಿ ಇಡ್ಲಿ ಹಿಟ್ಟು ಬಿಡುಗಡೆಯಾಗುವ ಬಗ್ಗೆ ಸುದ್ದಿಗಳಿತ್ತು.

ಆದರೆ ಬಳಿಕ ಇದರ ಬಿಡುಗಡೆ ಕೆಲವು ದಿನ ಮುಂದೂಡಲಾಗಿತ್ತು. ಇದಕ್ಕೆ ಕೆಲವು ಖಾಸಗಿ ಸಂಸ್ಥೆಗಳ ಲಾಬಿಯೂ ಕಾರಣ ಎಂಬ ಆರೋಪಗಳೂ ಕೇಳಿಬಂದಿತ್ತು. ಆದರೆ ಈಗ ಕೊನೆಗೂ ನಂದಿನಿ ತನ್ನದೇ ಬ್ರ್ಯಾಂಡ್ ನ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ ಮಾಡಿದೆ. ಇದರಲ್ಲಿ ಶೇ.5 ರಷ್ಟು ಪ್ರೊಟೀನ್ ಕೂಡಾ ಇದ್ದು, ನಂದಿನಿಯ ಇತರೆ ಉತ್ಪನ್ನಗಳಂತೆ ಗುಣಮಟ್ಟವನ್ನು ಕಾಪಾಡಿಕೊಳ್ಳಲಿದೆ.

ಸದ್ಯಕ್ಕೆ ಈ ಉತ್ಪನ್ನ ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಮಾತ್ರವೇ ಲಭ್ಯವಿರಲಿದೆ. ನಂದಿನಿ ಔಟ್ ಲೆಟ್ ಗಳಲ್ಲಿ ಮಾತ್ರವೇ ಸಿಗಲಿದೆ. 450 ಗ್ರಾಂ ಹಿಟ್ಟಿನ ಪ್ಯಾಕೆಟ್ ಗೆ 40 ರೂ. ಮತ್ತು 900 ಗ್ರಾಂ ತೂಕದ ಪೊಟ್ಟಣಕ್ಕೆ 80 ರೂ. ನಿಗದಿಗೊಳಿಸಲಾಗಿದೆ. ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಇಂತಹ ರೆಡಿ ಹಿಟ್ಟುಗಳಿಗೆ ಹೆಚ್ಚು ಬೇಡಿಕೆಯಿರುತ್ತವೆ. ಹೀಗಾಗಿ ಇಲ್ಲಿನ ಜನ ನಂದಿನಿಯ ಈ ಹೊಸ ಉತ್ಪನ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಈ ಉತ್ಪನ್ನ ಯಶಸ್ವಿಯಾದರೆ ರಾಜ್ಯದ ಉಳಿದ ಭಾಗಗಳಲ್ಲೂ ಲಭ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

Pehalgam viral video: ಬಿಸ್ಕತ್, ಚಾಕಲೇಟ್ ಬೇಡ ಅಪ್ಪ ಅಮ್ಮ ಬೇಕು ಎಂದು ಕಣ್ಣೀರು ಹಾಕುವ ಮಗುವಿನ ನೋಡಿದ್ರೆ ಅಳುವೇ ಬರುತ್ತೆ

ಪೆಹಲ್ಗಾಮ್ ದಾಳಿ ಯಾವುದೇ ಸಂದರ್ಭದಲ್ಲೂ ಒಪ್ಪಲಾಗದು: ಉಗ್ರರ ಪೈಶಾಚಿಕ ಕೃತ್ಯಕ್ಕೆ ವಿಶ್ವಸಂಸ್ಥೆ ಖಂಡನೆ

Pehalgam terror attack: ಕುಟುಂಬದವರಿಗೆ ನ್ಯಾಯ ಸಿಗಬೇಕು, ಕೇಂದ್ರಕ್ಕೆ ನಮ್ಮ ಬೆಂಬಲವಿದೆ ಎಂದ ಖರ್ಗೆ, ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments