Webdunia - Bharat's app for daily news and videos

Install App

ಎಲ್ಲಾ ಬೆಲೆ ಏರಿಕೆ ಮಾಡಿ ಫ್ರೀ ಗ್ಯಾರಂಟಿ ಅಂತ ಕೊಡ್ತಿದ್ದಾರೆ: ಹಾಲಿನ ದರ ಏರಿಕೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ

Krishnaveni K
ಶನಿವಾರ, 14 ಸೆಪ್ಟಂಬರ್ 2024 (10:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿರುವುದು ಜನರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿ ಫ್ರೀ ಗ್ಯಾರಂಟಿ ಕೊಡ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
 
ಕೆಲವು ದಿನಗಳ ಹಿಂದಷ್ಟೇ ಹಾಲಿನ ದರ 2 ರೂ.ಗಳಷ್ಟು ಏರಿಕೆಯಾಗಿತ್ತು. ಆಗ ಬೆಲೆ ಏರಿಕೆ ಮಾಡಿದರೇನಂತೆ ನಾವು 50 ಎಂಎಲ್ ಹಾಲು ಹೆಚ್ಚು ಕೊಡ್ತೇವೆ ಎಂದು ರಾಜ್ಯ ಸರ್ಕಾರ ಸಮಜಾಯಿಷಿ ನೀಡಿತ್ತು. ಆದರೆ ಇದೀಗ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಹಾಲಿನ ದರ ಏರಿಕೆಯ ಪರಿಣಾಮ ನೇರವಾಗಿ ತಟ್ಟುವುದು ಮಧ್ಯಮ ವರ್ಗದವರಿಗೆ. ಹಾಲು, ಪೆಟ್ರೋಲ್, ಡೀಸೆಲ್ ನಂತಹ ದಿನ ಬಳಕೆಯ ವಸ್ತುಗಳ ಬೆಲೆಯನ್ನೆಲ್ಲಾ ಏರಿಕೆ ಮಾಡಿ ಫ್ರೀ ಗ್ಯಾರಂಟಿ ಕೊಡ್ತೀವಿ ಎಂದು ಏನು ಪ್ರಯೋಜನ? ನಮಗೆ ಇದರಿಂದ ಜೀವನ ಮತ್ತಷ್ಟು ದುಬಾರಿಯೇ ಹೊರತು ಬೇರೆ ಏನೂ ಪ್ರಯೋಜನವಿಲ್ಲ. ಫ್ರೀ ಗ್ಯಾರಂಟಿ ಯೋಜನೆ ಕೊಡಿ ಎಂದು ನಾವು ಕೇಳಿದ್ದೆವಾ? ಈಗ್ಯಾಕೆ ರೈತರ ಹೆಸರಿನಲ್ಲಿ ಬೆಲೆ ಏರಿಕೆ ಮಾಡುತ್ತಿದ್ದೀರಿ ಎಂದು ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತೀ ಬಾರಿಯೂ ಸರ್ಕಾರ ಬೆಲೆ ಏರಿಕೆ ಮಾಡುವಾಗ ರೈತರು ಅಥವಾ ಬೇರೆ ರಾಜ್ಯಗಳಲ್ಲಿ ನಮಗಿಂತ ಹೆಚ್ಚು ಬೆಲೆಯಿದೆ ಎಂದು ಸಬೂಬು ನೀಡುತ್ತದೆ. ಆದರೆ ಇದರಿಂದ ಹೊರೆಯಾಗುತ್ತಿರುವುದು ಮಧ್ಯಮ ವರ್ಗದವರಿಗೆ. ರೈತರಿಗೂ ಇದರ ಪಾಲು ಸರಿಯಾಗಿ ಸಿಗುತ್ತಿಲ್ಲ. ಇದೀಗ ಆಕ್ರೋಶದ ನಡುವೆಯೂ ಸರ್ಕಾರ 5 ರೂ.ವರೆಗೆ ಹಾಲಿನ ದರ ಏರಿಕೆ ಮಾಡಲು ಹೊರಟಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments