Webdunia - Bharat's app for daily news and videos

Install App

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ

Webdunia
ಭಾನುವಾರ, 9 ಏಪ್ರಿಲ್ 2017 (08:27 IST)
ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನವಣಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.  ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಎಲ್ಲೆ. ಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ
  

ಶ್ರೀನಿವಾಸಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ನಂಜನಗೂಡಿನಲ್ಲಿ ಮತ್ತು ಮಾಜಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ನಿಧನದಿಂದ ತೆರವಾದ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.

ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತ್ತು ಕಾಂಗ್ರೆಸ್`ನಿಂದ ಕಳಲೆ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. 

ಇತ್ತ, ಗುಂಡ್ಲುಪೇಟೆಯಲ್ಲಿ ಮಹದೇವ ಪ್ರಸಾದ್ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಮತ್ತು ಬಿಜೆಪಿಯ ನಿರಂಜನ್ ಕುಮಾರ್ ನಡುವೆ ನೇರ ಹಣಾಹಣಿ ಇದೆ. ರಿಪಬ್ಲಿಕನ್ ಪಾರ್ಟಿಯ ಎಂ. ಶಿವರಾಜು, ಭಾರತೀಯ ಡಾ.ಬಿ.ಆರ್. ಅಂಬೇಡ್ಕರ್ ಜನತಾ ಪಾರ್ಟಿಯ ಎಂ. ಹೊನ್ನಾರಯ್ಯ, ಪಕ್ಷೇತರರಾದ ಕೆ ಸೋಮಶೇಖರ್, ಬಿ. ಮಹದೇವ ಪ್ರಸಾದ್ ಮತ್ತು ಎಂ. ಶಿವರಾಮು ಕಣದಲ್ಲಿದ್ದಾರೆ.

ಸಚಿವ ಸ್ಥಾನದಿಂದ ಕೈಬಿಟ್ಟ ಅಸ್ತ್ರವನ್ನ ಅನುಕಂಪದ ಅಲೆಯಾಗಿ ಬಳಸಿಕೊಂಡು ಗೆಲುವಿನ ಪತಾಕೆ ಹಾರಿಸಲು ನಂಜನಗೂಡಿನಲ್ಲಿ ಶ್ರೀನಿವಾಸ್ ಪ್ರಸಾದ್ ಮುಂದಾಗಿದ್ದಾರೆ. ಇದು ಸಿದ್ದರಾಮಯ್ಯ ಮತ್ತು ಶ್ರೀನಿವಾಸಪ್ರಸಾದ್ ನಡುವಿನ ಹೋರಾಟ ಎಂದೇ ಬಿಂಬಿಸಲಾಗಿದೆ. ಇತ್ತ, ಗುಂಡ್ಲುಪೇಟೆಯಲ್ಲಿ ಗೀತಾ ಮಹದೇವಪ್ರಸಾದ್`ಗೆ ಅನುಕಂಪದ ಅಲೆ ವರ್ಕೌಟ್ ಆಗುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವಿದೆ. ಏಪ್ರಿಲ್ 13ಕ್ಕೆ ಫಲಿತಾಂಶ ಹೊರಬೀಳಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments