Webdunia - Bharat's app for daily news and videos

Install App

ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ: ಪೂಜಾರಿ

Webdunia
ಬುಧವಾರ, 28 ಡಿಸೆಂಬರ್ 2016 (15:01 IST)
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಭವಿಷ್ಯ ನುಡಿದಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಈಗಲಾದರು ಸಿಎಂ ಸಿದ್ದರಾಮಯ್ಯ ಎಚ್ಚೆತ್ತುಕೊಳ್ಳಬೇಕು. ನಂಜನಗೂಡು ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಎಷ್ಟೇ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಸೋಲು ನಿಶ್ಚಿತ. ಕಾಂಗ್ರೆಸ್‌ನಲ್ಲಿ ಗೊಂದಲ ಇರುವುದರಿಂದ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಿಡಿಕಾರಿದರು.  
 
ಕರಾವಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಆದರೆ, ಕರಾವಳಿಯ ಇಬ್ಬರು ಮಾಜಿ ಸಿಎಂಗಳು ಎತ್ತಿನಹೊಳೆ ಯೋಜನೆಗೆ ಬೆಂಬಲ ನೀಡಿದ್ದಾರೆ. ಅವರಿಗೆ ತಾಕತ್ತಿದ್ದರೆ ಉಪ್ಪಿನಂಗಡಿ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಲಿ ಎಂದು ಸವಾಲ್ ಎಸೆದಿದ್ದಾರೆ. 
 
ನನಗೆ ಎಐಸಿಸಿಯಿಂದ ನೋಟಿಸ್ ಬಂದಿಲ್ಲ. ಅದು ಬರುವುದು ಇಲ್ಲ. ಕೆಪಿಸಿಸಿ ನಾಯಕರು ನನಗಿಂತ ಬುದ್ಧಿವಂತರು ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ್ ಪೂಜಾರಿ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments