ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತ ತಲುಪಿದೆ. ಸರ್ಕಾರಿ ಅಧಿಕಾರಿಗಳು ಅಂತಿಮ ಹಂತದ ಸಮೀಕ್ಷೆ ನಡೆಸುತ್ತಿದ್ದಾರೆ.
ಜಾತಿವಾರು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವೆಂದು ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಸ್ಪಷ್ಟನೆ ನೀಡಿದೆ. ಹೀಗಾಗಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ನಾರಾಯಣ ಮೂರ್ತಿ ದಂಪತಿ ಸಮೀಕ್ಷೆಯಲ್ಲಿ ಮಾಹಿತಿ ನೀಡಲು ನಿರಾಕರಿಸಿ, ಸ್ವಯಂ ದೃಢೀಕರಣ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಕುರಿತಾಗಿ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ಪತ್ರ ಬರೆದಿದ್ದಾರೆ. ಸಮೀಕ್ಷೆಯಲ್ಲಿ ನಮ್ಮ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ನಾವು ಹಿಂದುಳಿದ ಯಾವು ಜಾತಿಗೂ ಸೇರುವರಲ್ಲ. ಆದ್ದರಿಂದ ಈ ಸಮೀಕ್ಷೆ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಹಾಗಾಗಿ ನಮ್ಮ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುದಿಲ್ಲ ಮತ್ತು ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇವೆಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.