ಬಿಜೆಪಿ ಪರವಾದ ವಾತಾವರಣ ನಿರ್ಮಿಸಲು ರಾಜ‌್ಯಕ್ಕೆ ಮೋದಿ ಭೇಟಿ

Webdunia
ಶುಕ್ರವಾರ, 9 ಫೆಬ್ರವರಿ 2018 (16:25 IST)
ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಎಲ್ಲ ಭಾಗಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ.
 
ಮೈಸೂರು, ದಾವಣಗೆರೆ ಹಾಗೂ ಕಲಬುರ್ಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ರಾಜ್ಯ ಘಟಕಕ್ಕೆ ದೆಹಲಿಯಿಂದ ಸೂಚನೆ ನೀಡಲಾಗಿದೆ. 

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಹೇಗಾದರೂ ಮಾಡಲು ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ ರಾಜ್ಯ ಘಟಕಕ್ಕೆ ರಾಜ್ಯದ ವಿವಿಧ ಭಾಗಗಳಲ್ಲಿ ಸಮಾವೇಶ ಆಯೋಜಿಸಲು ಸೂಚಿಸಿದೆ.
 
ಮುಂಬರುವ ಲೋಕಸಭೆ ಚುನಾವಣೆಯ ದೃಷ್ಠಿಯಿಂದಲೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಅಗತ್ಯವಾಗಿದ್ದು, ಆದ್ದರಿಂದ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ನಿರಂತರವಾಗಿ ಸೂಚನೆಗಳು ನೀಡುತ್ತಿದೆ. ಮೋದಿ ರಾಜ್ಯಕ್ಕೆ ಬಂದಾಗ ಕಾಂಗ್ರೆಸ್‌ನ ಕೆಲ ಶಾಸಕರು ಬಿಜೆಪಿ ಸೇರಲು ತಯಾರಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಬಿಜೆಪಿ ಅಧಿಕಾರಕ್ಕೆ ಬರುವ ಸಂದೇಶ ರವಾನಿಸಿದಂತಾಗುತ್ತದೆ ಎಂದು ಆಲೋಚನೆ ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments