Webdunia - Bharat's app for daily news and videos

Install App

ಬಿಜೆಪಿ ಪರವಾದ ವಾತಾವರಣ ನಿರ್ಮಿಸಲು ರಾಜ‌್ಯಕ್ಕೆ ಮೋದಿ ಭೇಟಿ

Webdunia
ಶುಕ್ರವಾರ, 9 ಫೆಬ್ರವರಿ 2018 (16:25 IST)
ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣ ಮಾಡಲು ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ನಡೆಸಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ರಾಜ್ಯದ ಎಲ್ಲ ಭಾಗಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ.
 
ಮೈಸೂರು, ದಾವಣಗೆರೆ ಹಾಗೂ ಕಲಬುರ್ಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ರಾಜ್ಯ ಘಟಕಕ್ಕೆ ದೆಹಲಿಯಿಂದ ಸೂಚನೆ ನೀಡಲಾಗಿದೆ. 

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು ಹೇಗಾದರೂ ಮಾಡಲು ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ ರಾಜ್ಯ ಘಟಕಕ್ಕೆ ರಾಜ್ಯದ ವಿವಿಧ ಭಾಗಗಳಲ್ಲಿ ಸಮಾವೇಶ ಆಯೋಜಿಸಲು ಸೂಚಿಸಿದೆ.
 
ಮುಂಬರುವ ಲೋಕಸಭೆ ಚುನಾವಣೆಯ ದೃಷ್ಠಿಯಿಂದಲೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಅಗತ್ಯವಾಗಿದ್ದು, ಆದ್ದರಿಂದ ಬಿಜೆಪಿ ವರಿಷ್ಠರು ರಾಜ್ಯ ಘಟಕಕ್ಕೆ ನಿರಂತರವಾಗಿ ಸೂಚನೆಗಳು ನೀಡುತ್ತಿದೆ. ಮೋದಿ ರಾಜ್ಯಕ್ಕೆ ಬಂದಾಗ ಕಾಂಗ್ರೆಸ್‌ನ ಕೆಲ ಶಾಸಕರು ಬಿಜೆಪಿ ಸೇರಲು ತಯಾರಾಗಿದ್ದು, ಈ ಮೂಲಕ ರಾಜ್ಯದ ಜನತೆಗೆ ಬಿಜೆಪಿ ಅಧಿಕಾರಕ್ಕೆ ಬರುವ ಸಂದೇಶ ರವಾನಿಸಿದಂತಾಗುತ್ತದೆ ಎಂದು ಆಲೋಚನೆ ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments