Webdunia - Bharat's app for daily news and videos

Install App

ಮಹಾನಗರದಲ್ಲಿ ನಶೆ ಪುಂಡರ ಹಾವಳಿ

Webdunia
ಸೋಮವಾರ, 25 ಅಕ್ಟೋಬರ್ 2021 (22:13 IST)
ಬೆಂಗಳೂರು: ಮಹಾನಗರದಲ್ಲಿ ನಶೆ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಒಂದಿಲೊಂದು ಕಿರಿಕ್ ಮಾಡುತ್ತ ಜನರಿಗೆ ಕಾಟ ಕೊಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಕೆಲ ಪುಂಡರು ಆಟವಾಡಲು ಬಂದ ಬಾಲಕರನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ಹಿಂಸೆ ನೀಡುವ ಮೂಲಕ ಗಾಂಜಾ ಮತ್ತಿನಲ್ಲಿ ಕ್ರೂರಿ ವರ್ತನೆ ತೋರಿದ್ದಾರೆ.
ಬೆಂಗಳೂರಿನ ಕೆ.ಆರ್. ಪುರಂನ ದೇವಸಂದ್ರ ವಾರ್ಡ್ ಬಳಿ  ಘಟನೆ ನಡೆದಿದೆ. ಶಾಲೆಯ ಮೈದಾನಕ್ಕೆ ಆಟವಾಡಲು ಬಂದ ಬಾಲಕರನ್ನು ಕೆಲ ಯುವಕರ ಗುಂಪು ಹಿಂಸಿಸಿದೆ. ಆಟವಾಡಲು ಬಂದ ಬಾಲಕರನ್ನು ಯುವಕರು ಸುತ್ತುವರೆದು ಸತತ ಒಂದು ಗಂಟೆಗೂ ಅಧಿಕ ಅವಧಿ ಹಿಂಸೆ ನೀಡಿದ್ದಾರೆ. ಅಲ್ಲದೆ ಟಾರ್ಚರ್ ನೀಡುವುದನ್ನು ವಿಡಿಯೋ ಮಾಡಿ ಕುಚೇಷ್ಟೆ ಮೆರೆದಿದ್ದಾರೆ.
ಬಳಿಕ ಬಾಲಕರನ್ನು ಒಂದೆಡೆ ಕೂರಿಸಿ ಹಲ್ಲೆ ನಡೆಸಿ ಮರಕ್ಕೆ ಕಟ್ಟಿಹಾಕಿ ಬೀಡಿ ಸೇದುವಂತೆ ಹಿಂಸೆ ಮಾಡಿದ್ದಾರೆ. ಮಕ್ಕಳು ಕಣ್ಣೀರಿಡುತ್ತ ಎಷ್ಟೇ ಗೋಳಾಡಿದರು ಪುಂಡರ ಗ್ಯಾಂಗ್ ಬಾಲಕರನ್ನು ಬಿಡದೆ ಹಿಂಸಿಸಿದ್ದಾರೆ.
ಕೃತ್ಯ ಬಳಿಕ ಕಣ್ಣೀರು ಹಾಕುತ್ತ ಬಾಲಕರು ಮನೆಗೆ ತೆರಳಿದ್ದಾರೆ. ತಮ್ಮ ತಮ್ಮ ಪೊಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್ ಘಟನೆ ಸಂಬಂಧ ಪೊಲೀಸರ ಗಮನಕ್ಕೆ ತಂದಿದ್ದಾರೆ.
ಸುಮೋಟೋ ಪ್ರಕರಣ ದಾಖಲಿಸಿ ಐವರ ಬಂಧನ:
ಇನ್ನು ಮಕ್ಕಳಿಗೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ರಾಜು(18) ಸೇರಿ ಐವರನ್ನು ಬೆಂಗಳೂರಿನ ಮಹದೇವಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ. ಐವರು ಆರೋಪಿಗಳ ಪೈಕಿ ನಾಲ್ವರು ಅಪ್ರಾಪ್ತರು. ಸದ್ಯ ಮಹದೇವಪುರ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments