Webdunia - Bharat's app for daily news and videos

Install App

ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಪಕ್ಷಕ್ಕೆ ಬಿ ಟೀಂ ಆಗಿದೆ: ಪ್ರಿಯಾಂಕ್ ಖರ್ಗೆ

Webdunia
ಮಂಗಳವಾರ, 12 ಸೆಪ್ಟಂಬರ್ 2023 (07:45 IST)
ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಯು ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಬಿ ಟೀಂ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅವರ ಅಸ್ತಿತ್ವ ಉಳಿಸಿಕೊಳ್ಳೋಕೆ ಮೈತ್ರಿ. ಮೋದಿ ಹವಾ ದಕ್ಷಿಣ ಭಾರತದಲ್ಲಿ ಇಲ್ಲ. ಇಲ್ಲಿ ಮೋದಿ ಆಟ ನಡೀತಾ ಇಲ್ಲ. ಜೆಡಿಎಸ್ ಬಿ ಟೀಂ ಬಿಜೆಪಿ ಆಗಿದೆ.
 
ಮೂರು ಹುದ್ದೆ ಆಯ್ಕೆ ಮಾಡಕ್ಕಾಗ್ತಿಲ್ಲ ರಾಷ್ಟ್ರೀಯ ಪಕ್ಷ ಪ್ರಾದೇಶಿಕ ಪಕ್ಷಕ್ಕೆ ಬಿ ಟೀಂ ಆಗಿದೆ. ಮೈತ್ರಿ ನಂತ್ರ ವಿಪಕ್ಷ ನಾಯಕನ ಆಯ್ಕೆ ಆಗಬಹುದು. ಯಾಕಂದ್ರೆ ಈ ಮೊದಲೇ ಸದನದಲ್ಲಿ ನಾವು ನೋಡಿದ್ದೇವೆ. ಹೀಗಾಗಿ ಆಯ್ಕೆ ಯಾರು ಆಗಬಹುದು ಎಂದು ಊಹಿಸಿ. ಸೀಟ್ ಮತ್ತು ಸದನದಲ್ಲೂ ಹೊಂದಾಣಿಕೆ ಇದೆಯಾ ಅನ್ನೋದು ಸಂಶಯ ಎಂದಿದ್ದಾರೆ.

ಆಪರೇಷನ್ ಹಸ್ತದ ಬಗ್ಗೆ ಮಾತನಾಡಿದ ಅವರು, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು ಯಾರನ್ನೂ ಕರೆದುಕೊಳ್ಳಲ್ಲ ಅಂತಾ ಮೊದಲೇ ಹೇಳಿದ್ರು. ಅದೇ ರೀತಿ ನಾವು ಯಾರನ್ನೂ ಕರೆದುಕೊಳ್ಳಲಿಲ್ಲ. ನಾವು ಯಾರನ್ನೂ ಖರೀದಿ ಮಾಡಿಲ್ಲ. ಅವರೇ ಬರ್ತಾರೆ ಅಂದ್ರೆ ಸ್ವಾಗತ ನಾವು ಸಮೃದ್ಧ ಕರ್ನಾಟಕ ಚಿಂತನೆಯಲ್ಲಿದ್ದೇವೆ ಎಂದಿದ್ದಾರೆ. 

ಬಿ.ಕೆ ಹರಿಪ್ರಸಾದ್ ಸಿಎಂಗೆ ಬೈದ ವಿಚಾರ ಹರಿಪ್ರಸಾದ್ ಹೈ ಕಮ್ಯಾಂಡ್ ಜೊತೆ ಮಾತನಾಡಬೇಕಿತ್ತು. ಹೇಳಿಕೆ ನನಗೆ ಗೊತ್ತಿಲ್ಲ ಸಮಾಜದ ಪರ ಹೋರಾಟ ಮಾಡೋದ್ರಲ್ಲಿ ತಪ್ಪಿಲ್ಲ. ಚೌಕಟ್ಟಿನೊಳಗೆ ಮಾತಾಡೋದು ಒಳ್ಳೆದು. ಅವರು ಎಲ್ಲೂ ಕೂಡ ಸಿಎಂ ಹೆಸರು ಬಳಸಿಲ್ಲ. ಅನಾವಶ್ಯಕ ಗೊಂದಲ ಸೃಷ್ಟಿಸೋದು ಬೇಡ. ಬಿಕೆ ಹರಿಪ್ರಸಾದ್ ಎಲ್ಲಿಯೂ ಕೂಡ ಸಿದ್ದರಾಮಯ್ಯ ಹೆಸರು ಹೇಳಿಲ್ಲ. ಸಿಎಂ ಕೂಡ ಇದನ್ನು ಸ್ಪಷ್ಟಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments