Publish Date: Wed, 07 Aug 2019 (17:02 IST)
Updated Date: Wed, 07 Aug 2019 (17:03 IST)
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮುಖ್ಯರಸ್ತೆಗಳೇ ಬಂದ್ ಆಗಿವೆ.
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಆಗಿದೆ.
ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿಯೂ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.
ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳಲ್ಲಿ ಭಾರೀ ಪ್ರಮಾಣದ ನೀರು ತುಂಬಿಕೊಂಡಿದೆ.
ಬಾಗಲಕೋಟ - ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ವಾಹನ ಸವಾರರಿಗೆ ಕಾಣುತ್ತಲೇ ಇಲ್ಲ. ಭಾರೀ ನೀರಿನಲ್ಲಿ ರಸ್ತೆಯೇ ಕಾಣದಾಗಿದೆ.
ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆಯಾಗಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಸೇರಿದಂತೆ ಹಲವೆಡೆ ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ವಾಹನಗಳ ಸವಾರರ ಸಂಕಷ್ಟಕ್ಕೆ ಕಾರಣವಾಗಿದೆ.