Webdunia - Bharat's app for daily news and videos

Install App

ಪ್ರಾಕೃತಿಕ ವಿಕೋಪ ನಿರ್ವಹಣೆ: ಬೆಂಗಳೂರಿಗೆ 4 ಎಸ್‌ಡಿಆರ್‌ಎಫ್ ತಂಡ ರಚನೆ

Webdunia
ಶುಕ್ರವಾರ, 19 ನವೆಂಬರ್ 2021 (20:00 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಅನಿರೀಕ್ಷಿತ ಮಳೆ ಮುಂದುವರಿದಿದೆ. ಇದರ ಪರಿಣಾಮ ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಆಗುತ್ತಿದೆ. ಆದ್ದರಿಂದ ಬೆಂಗಳೂರು ಕೇಂದ್ರಿತವಾಗಿ ನಾಲ್ಕು ಎಸ್‌ಡಿಆರ್‌ಎಫ್ ತಂಡಗಳ ರಚನೆಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಗ್ಗು ಪ್ರದೇಶದಲ್ಲಿ ಮಳೆಯ ಅವಾಂತರವನ್ನು ತಡೆಯಲು ಮತ್ತು ಪರಿಹಾರಕ್ಕಾಗಿ ತಂಡಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಎನ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಳ್ಳುವುದಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಅಧಿಕಾರಿಗಳ ಸಭೆ ನಡೆಸಿ ಮಳೆನಿಂತ ತಕ್ಷಣ ಬೆಂಗಳೂರಿನ ರಸ್ತೆಗಳ ಸಮಗ್ರ ರಿಪೇರಿಗೆ ಸೂಚಿಸಲಾಗಿದೆ. ರಸ್ತೆಗಳ ನಿರ್ವಹಣಾ ಗುತ್ತಿಗೆದಾರರು ರಿಪೇರಿ ಮಾಡದೇ ಇದ್ದರೆ, ಗುತ್ತಿಗೆದಾರರ ಪಾವತಿಯನ್ನು ತಡೆಹಿಡಿದು ಬಿಬಿಎಂಪಿಯೇ ರಿಪೇರಿ ಮಾಡಲು ನಿರ್ದೇಶನ ನೀಡಲಾಗಿದೆ. ಅಲ್ಲದೇ 110 ಹಳ್ಳಿಗಳಲ್ಲಿ ಒಳಚರಂಡಿ ಜಾಲಕ್ಕೆ ತೊಂದರೆಯಾಗಿದೆ. ಇದಕ್ಕೆ 280 ಕೋಟಿ ರೂ. ಬಿಡುಗಡೆ ಮಾಡಿ, ಕಾಮಗಾರಿ ನಡೆಸಲು ಅನುಮತಿಸಲಾಗಿದೆ ಎಂದು ವಿವರಿಸಿದರು.
ಅನಿರೀಕ್ಷಿತ ಮಳೆಯಿಂದಾಗಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕೃಷಿ ಇಲಾಖೆಯಿಂದ ಬೆಳೆ ಹಾನಿ ಸಮೀಕ್ಷೆಯನ್ನೂ ಮಾಡಲಾಗುತ್ತಿದೆ. ತೋಟಗಾರಿಕಾ ಇಲಾಖೆಯು ಹಣ್ಣು ಹಂಪಲು, ತರಕಾರಿಗಳ ನಷ್ಟದ ಕುರಿತು ನಿಗಾ ವಹಿಸುತ್ತದೆ. ನಷ್ಟ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ. ಬೆಳೆಗಳ ಕನಿಷ್ಠ ಬೆಂಬಲಬೆಲೆ ಖರೀದಿ ಸಂಬಂಧ ಇಂದು ಮಹತ್ವದ ಸಭೆಯೊಂದನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments