Webdunia - Bharat's app for daily news and videos

Install App

ನವಲಿ ಸಮಾನಾಂತರ ಜಲಾಶಯ : ಸಚಿವ ಸಂಪುಟ ಗ್ರೀನ್ ಸಿಗ್ನಲ್

Webdunia
ಭಾನುವಾರ, 17 ಮೇ 2020 (18:59 IST)
ಬಹು ನಿರೀಕ್ಷಿತ, ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯ ಸರ್ಕಾರ ಹೊಸ ಯೋಜನೆ ರೂಪಿಸಿದೆ.

ತುಂಗಭದ್ರಾ ಜಲಾಶಯದಲ್ಲಿ ಬಹಳಷ್ಟು ಹೂಳು ತುಂಬಿರುವ ಕಾರಣ ಉಂಟಾಗಿದ್ದ ನೀರು ಸಂಗ್ರಹಣೆಯ ಸಾಮರ್ಥ್ಯ ಸಮಸ್ಯೆಯನ್ನು ನೀಗಿಸಲು ಪರ್ಯಾಯ ಜಲಾಶಯ ನಿರ್ಮಾಣ ಕುರಿತು ವಿಸ್ತೃತ ಯೋಜನಾ ವರದಿ ತಯಾರಿಸಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ.

ಪ್ರಸ್ತುತ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ 130 TMC ಇದ್ದರೂ 31.616 TMC ಯಷ್ಟು ನೀರು ಹೂಳು ತುಂಬಿರುವ ಕಾರಣದಿಂದ ಕನಿಷ್ಠ 30 TMC ನೀರು ವ್ಯರ್ಥವಾಗುತ್ತಿತ್ತು.

ಈ ನೀರನ್ನು ಹಿಡಿದಿಟ್ಟು ಸಮರ್ಪಕವಾಗಿ ಬಳಕೆ ಮಾಡಲು ಮುಂದಾಗಿರುವ ಜಲಸಂಪನ್ಮೂಲ ಇಲಾಖೆ, ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣ ಮಾಡುವ ನೂತನ ಯೋಜನೆ ರೂಪಿಸಿದೆ.

ಅದರಂತೆ ನವಲಿ ಗ್ರಾಮದ ಹತ್ತಿರ ಹೊಸದಾಗಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತಕ್ಕೆ ಕರ್ನಾಟಕ ರಾಜ್ಯದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಸಮತೋಲನ ಜಲಾಶಯ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ ತಯಾರಿಸಲು 14.30 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಜಲಸಂಪನ್ಮೂಲ ಇಲಾಖೆ ಆದೇಶಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments