Webdunia - Bharat's app for daily news and videos

Install App

'ಕೈ'ವಶರಾದ ನವಜೋತ್ ಸಿಂಗ್ ಸಿಧು!

Webdunia
ಭಾನುವಾರ, 15 ಜನವರಿ 2017 (12:49 IST)
ಕ್ರಿಕೆಟರ್ ಪರಿವರ್ತಿತ ರಾಜಕಾರಣಿ, ಭಾರತೀಯ ಜನತಾ ಪಕ್ಷದ ಮಾಜಿ ನಾಯಕ ನವಜೋತ್ ಸಿಂಗ್ ಸಿಧು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. 
ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ನವಜೋತ್ ಸಿಧು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. 
 
ಪಕ್ಷದ ವರಿಷ್ಠರ ಜತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಸಿಧು ಮತ್ತು ಅವರ ಪತ್ನಿ ಬಿಜೆಪಿಯನ್ನು ತ್ಯಜಿಸಿದ್ದರು. 2004 ಮತ್ತು 2014 ನಡುವೆ ಲೋಕಸಭೆಯಲ್ಲಿ ಅಮೃತಸರವನ್ನು ಪ್ರತಿನಿಧಿಸಿದ್ದ ಸಿಧು, ಬಿಜೆಪಿ ತಮ್ಮನ್ನು ಪಂಜಾಬ್‌ನಿಂದ ಹೊರಗಿಡಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದರು. ಜತೆಗೆ ತಮ್ಮನ್ನು 'ಅಲಂಕಾರಿಕ ಕೃತಿ'ಯನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
 
ಬಿಜೆಪಿ ತ್ಯಜಿಸಿದ ಬಳಿಕ ಕೇಜ್ರಿವಾಲ್ ನೇತೃತ್ವದ ಆಪ್ ಸೇರಲೆತ್ನಿಸಿದ್ದ ಅವರು, ಬಳಿಕ ‘ಆವಾಜ್ ಇ ಪಂಜಾಬ್’ ಪಕ್ಷವನ್ನು ಸ್ಥಾಪಿಸಿದ್ದರು. 
 
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಮುಂದಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸಿಧು ನೇತೃತ್ವದ ‘ಆವಾಜ್ ಇ ಪಂಜಾಬ್’ ಸ್ಪರ್ಧಿಸಬೇಕಿತ್ತು. ಆದರೆ, ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿದರೆ, ಆಡಳಿತ ವಿರೋಧಿ ಮತಗಳನ್ನು ವಿಭಜಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.
 
ಬಳಿಕ ಕಾಂಗ್ರೆಸ್ ಸೇರುವ ಇಂಗಿತವನ್ನು ವ್ಯಕ್ತ ಪಡಿಸಿದ್ದ ಸಿಧು ಅವರ ಪತ್ನಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತೀಗ ಸಿಧು ಸಹ ಅಧಿಕೃತವಾಗಿ ಪಕ್ಷವನ್ನು ಸೇರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments