Webdunia - Bharat's app for daily news and videos

Install App

ಸರ್ಕಾರದಿಂದ ಜನರಿಗೆ ಚೊಂಬು, ನಕ್ಸಲರಿಗೆ ಲಕ್ಷ ಲಕ್ಷ ಪ್ಯಾಕೇಜ್: ಸುನಿಲ್ ಕುಮಾರ್

Sampriya
ಬುಧವಾರ, 8 ಜನವರಿ 2025 (14:11 IST)
Photo Courtesy X
ಬೆಂಗಳೂರು: ನಕ್ಸಲರ ಶರಣಾಗತಿ ಪ್ಯಾಕೇಜ್‌ಗೆ ಮಾಜಿ ಸಚಿವ ಸುನಿಲ್‌ ಕುಮಾರ್‌ ಕಿಡಿಕಾರಿದ್ದಾರೆ. ಇದು ನಕ್ಸಲರ ಶರಣಾಗತಿ ಅಲ್ಲ. ಕಾಡು ನಕ್ಸಲರನ್ನು ನಾಡು ನಕ್ಸಲರನ್ನಾಗಿ ಮಾಡುವ ಪ್ಯಾಕೇಜ್ ಇದು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಮೇಶ್ವರ ಕಫೆಗೆ ಬಾಂಬ್ ಇಟ್ಟವರನ್ನು ಹಾಗೂ ಪೊಲೀಸ್ ಸ್ಟೇಷನ್ ಗೆ ಬೆಂಕಿ ಇಟ್ಟವರನ್ನ ಶರಣಾಗತಿ ಆದರೆ ಬಿಡ್ತಾರಾ? ಶರಣಾಗತಿಗೂ ಮೊದಲೇ ಎ, ಬಿ, ಸಿ ಎಂದು ಪ್ಯಾಕೇಜ್ ಘೋಷಣೆ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರ ಮನೆಯಲ್ಲೇ ಶರಣಾಗತಿ ಆಗುತ್ತದೆ ಅಂದ್ರೆ ಅದಕ್ಕಿಂತ ದೊಡ್ಡ ದುರಂತ ಯಾವುದು ಇಲ್ಲ ಎಂದು ಹೇಳಿದರು.

ನಕ್ಸಲ್ ಚಿಂತನೆಗೆ ಬೆಂಬಲ ಸಿಗದೇ ಇದ್ದಾಗ ಸಿದ್ದರಾಮಯ್ಯ ಸರ್ಕಾರ ಪ್ಯಾಕೇಜ್‌ ಆಸೆಯ ಚಿಗುರು ಹೊರಡಿಸಿದೆ. ಹಣವನ್ನು ನೀಡಿ ಶರಣಾಗತಿ ಮಾಡಿಸುವುದನ್ನು ನಾವು ವಿರೋಧಿಸುತ್ತೇವೆ. ಬಡವರಿಗೆ ನೆರವು ಕೊಡದೇ ಬಂದೂಕುಗಳು ಹಿಡಿದವರಿಗೆ ನೆರವು ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಇವರು ನಗರಕ್ಕೆ ಬಂದ ನಂತರ ಕಾಡಿಗೆ ಕಳುಹಿಸಿ ಕೊಡುವ ಕೆಲಸ ಆಗಲಿದೆ. ಶಾಂತಿಗಾಗಿ ನಾಗರೀಕ ವೇದಿಕೆ ಮುಂದೆ ಶರಣಾಗತಿ ಆಗುವುದು ಬೇಡ. ನ್ಯಾಯಾಲಯದ ಮುಂದೆ ಶರಣಾಗಲಿ ಎಂದರು.

ಹಲವು ವರ್ಷಗಳಿಂದ ನಕ್ಸಲ್ ವಿರುದ್ಧ ಹೋರಾಡಿದ ನಕ್ಸಲ್‌ ನಿಗ್ರಹ ಪಡೆಯ ನೈತಿಕ ಸ್ಥೈರ್ಯ ಕಳೆದುಕೊಳ್ಳುವ ಸಂದರ್ಭ ಇದು. ವಿಕ್ರಮ್ ಗೌಡ  ಎನ್‌ಕೌಂಟರ್‌ ಆಗುತ್ತಿದ್ದಂತೆ ತನಿಖೆ ಆಗಬೇಕು ಅಂತಾರೆ. ಶರಣಾಗತಿ ಆಗುವುದಾದರೆ ನ್ಯಾಯಾಲಯದಲ್ಲಿ ಶರಣಾಗಲಿ. ಐದು ವರ್ಷಗಳಲ್ಲಿ ಬಿಡುಗಡೆ ಆಗಿರುವ ನಕ್ಸಲರ ಚಟುವಟಿಕೆಗಳನ್ನು ಬಿಡುಗಡೆ ಮಾಡಿ ಎಂದು ಗೃಹ ಸಚಿವರಿಗೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments