Webdunia - Bharat's app for daily news and videos

Install App

ಶರಣಾಗತಿ ಬೆನ್ನಲ್ಲೇ ಪತ್ತೆಯಾಯ್ತು ನಕ್ಸಲರ ಎ.ಕೆ 56 ಗನ್‌, ನೂರಾರು ಮದ್ದುಗುಂಡು: ಎಸ್ಪಿ ಹೇಳಿದ್ದೇನು

Sampriya
ಶನಿವಾರ, 11 ಜನವರಿ 2025 (14:32 IST)
Photo Courtesy X
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರ ಸಮ್ಮುಖದಲ್ಲಿ ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ. ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ಸಿಕ್ಕಿದೆ.

ಅರಣ್ಯದಲ್ಲಿ 7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು 133, 12 ಬೋರ್ ಕಾರ್ಟ್ರಿಡ್ಜಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು 8 ಸೇರಿ ಒಟ್ಟು 176  ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ಜಿನ್ 01 ದೊರೆತಿದೆ.

ಶಸ್ತ್ರಸ್ತಗಳನ್ನು ವಶಕ್ಕೆ ಪಡೆದು, ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಈ ಸಂಬಂಧ ಸೆಕ್ಷನ್ 3, 25 (1 ಬಿ), 7 ಮತ್ತು 25 (1 ಎ) ಶಸ್ತ್ರಾಸ್ತ್ರ ಕಾಯ್ದೆ 1959ರ ಅಡಿ ಜಯಪುರ​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಮುಖ್ಯವಾಹಿನಿಗೆ ಬಂದ‌ ನಕ್ಸಲರು, ಅದೇ ಕಾಡಿನಿಂದ ಹೊರ ಬಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments