Webdunia - Bharat's app for daily news and videos

Install App

ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್‌: ಬೆಂಗಳೂರು ರೈನೋಸ್‌ ಶುಭಾರಂಭ

Webdunia
ಬುಧವಾರ, 15 ಮೇ 2019 (15:26 IST)
ಇಂಡೋ ಇಂಟರ್ ನ್ಯಾಷನಲ್ ಪ್ರೀಮಿಯರ್ ಕಬಡ್ಡಿ ಲೀಗ್ (ಐಐಪಿಕೆಎಲ್)ಗೆ ಇಲ್ಲಿನ ಬಾಲೆವಾಡಿ ಶ್ರೀ ಶಿವಛತ್ರಪತಿ ಒಳಾಂಗಣ ಕ್ರೀಡಾಂಗಣದಲ್ಲಿ ಅದ್ಧೂರಿ ಆರಂಭ ಸಿಕ್ಕಿದ್ದು, ಎರಡನೆ ದಿನದ ಪಂದ್ಯದಲ್ಲಿ ಬೆಂಗಳೂರು ರೈನೋಸ್‌ ಪಾಂಡಿಚೇರಿ ಪ್ರೊಡಾಟರ್ಸ್‌ ತಂಡವನ್ನು 7 ಅಂಕಗಳಿಂದ ಮಣಿಸಿ ಶುಭಾರಂಭ ಮಾಡಿದೆ.

ಪುಣೆ, ಮೈಸೂರು ಮತ್ತು ಬೆಂಗಳೂರಿನಲ್ಲಿ ಜೂನ್ 4ರ ವರೆಗೆ ಪಂದ್ಯಗಳು ನಡೆಯಲಿದ್ದು, ಕರ್ನಾಟಕದ 13 ಆಟಗಾರರು ಟೂರ್ನಿಯಲ್ಲಿ ಆಡಲಿದ್ದಾರೆ.  

ವಿಜೇತ ತಂಡ ಬೆಂಗಳೂರು ರೈನೋಸ್‌ 39 ಅಂಕಗಳನ್ನು ಗಳಿಸಿದರೆ, ಪಾಂಡಿಚೇರಿ ತಂಡ 32 ಅಂಕಗಳನ್ನು ಗಳಿಸಿತು. ಜಿದ್ದಾಜಿದ್ದಿನ ಪಂದ್ಯದ ಮೊದಲಾರ್ಧದಲ್ಲಿ ಬೆಂಗಳೂರು 20 ಅಂಕ ಮತ್ತು ಪಾಂಡಿಚೇರಿ 17 ಅಂಕಗಳನ್ನು ಗಳಿಸಿತ್ತು.
ಐಐಪಿಕೆಎಲ್‌ ಪ್ರಾಯೋಜಕ ಡಾ.ಪ್ರಸಾದ್‌ ಬಾಬು ಮಾತನಾಡಿ, ಎರಡೂ ತಂಡಗಳು ಉತ್ತಮವಾಗಿ ಆಡಿವೆ ಎಂದರು. ಮುಂದಿನ ಪಂದ್ಯಗಳಿಗೆ ಉಭಯ ತಂಡಗಳಿಗೆ ಶುಭ ಹಾರೈಸಿದರು.

ಪುಣೆ, ಮೈಸೂರು, ಬೆಂಗಳೂರಿನಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ ಎಂದು ಐಐಪಿಕೆಎಲ್‌ನ ರವಿಕಿರಣ್‌ ಹೇಳಿದ್ದಾರೆ. ಸರಣಿಯ ಫೈನಲ್‌ ಜೂ.4ರಂದು ಬೆಂಗಳೂರಿನಲ್ಲಿ ನಡೆಯಲಿದೆ.  

ಅತ್ಯಂತ ವೈಭವದಿಂದ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನ ಉದಯೋನ್ಮುಖ ನಟಿ ಕೈನಾತ್ ಅರೋರಾ ನೃತ್ಯ, ಉತ್ತರ ಭಾರತದ ಸ್ಟಾರ್ ಹಾಡುಗಾರ ಎಂಡಿಕೆಡಿಯ ಮೈ ನವಿರೇಳಿಸುವ ನೃತ್ಯ, ದೇಶಭಕ್ತಿಯ ಗಾಯಕಿ ಕವಿ ಸಿಂಗ್ ಉದ್ಘಾಟನಾ ಸಮಾರಂಭದಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಈ ವೇಳೆ ಎಂಟು ತಂಡದ ಮಾಲೀಕರು ಹಾಜರಿದ್ದರು.
ಬೆಂಗಳೂರು ರೈನೋಸ್, ಚೆನ್ನೈ ಚಾಲೆಂಜರ್ಸ್, ದಿಲ್ಲರ್ ಡೆಲ್ಲಿ, ತೆಲುಗು ಬುಲ್ಸ್, ಛಿ ರಾಜೆ, ಪುಣೆ ಪ್ರೈಡ್, ಹರಿಯಾಣ ಹಿರೋಸ್,  ಪಾಂಡ್ಯ ಪ್ರೆಡಿಕ್ಟರ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments