Webdunia - Bharat's app for daily news and videos

Install App

ನೆಹರು ಸ್ಕೂಲ್ ಓಪನ್‍: ಪೋಷಕರಿಗೆ ಹೈಕೋರ್ಟ್ ರಿಲೀಫ್

Webdunia
ಮಂಗಳವಾರ, 27 ಸೆಪ್ಟಂಬರ್ 2022 (11:14 IST)
ಬೆಂಗಳೂರು : ಐಎಂಎ ನಡೆಸುತ್ತಿದ್ದ ಸ್ಕೂಲ್ಗೆ ಇಂದು ಅಧಿಕೃತವಾಗಿ ಬೀಗ ಬಿದ್ದಿದೆ. ಸ್ಕೂಲ್ ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಶಾಲೆ ಸೀಝ್ ಮಾಡುವಾಗ ಆವರಣದಲ್ಲಿ ಪೋಷಕರ ಕಣ್ಣೀರ ಕೋಡಿಯೇ ಹರಿದಿದ್ದು, ಸ್ಕೂಲ್ ಕ್ಲೋಸ್ ಮಾಡದಂತೆ ಗಲಾಟೆ ಮಾಡಿದ್ದಾರೆ.

ಬೆಂಗಳೂರಿನ ಶಿವಾಜಿನಗರದ ನೆಹರು ಸ್ಕೂಲ್ನಲ್ಲಿ, ದಯವಿಟ್ಟು ನಿಮಗೆ ಕೈಮುಗಿಯುತ್ತೇವೆ ಶಾಲೆಗೆ ಬೀಗ ಹಾಕಬೇಡಿ. ನಮ್ಮ ಮಕ್ಕಳನ್ನು ಬೀದಿಗೆ ತರಬೇಡಿ.. ಆರು ತಿಂಗಳು ಕಾಲಾವಕಾಶ ಕೊಡಿ.
ಹೀಗೆ ಕಣ್ಣೀರು ಹಾಕಿಕೊಂಡು ಶಾಲಾ ಆವರಣದಲ್ಲಿ ಪೋಷಕರು ಪರಿಪರಿಯಾಗಿ ಕೇಳಿಕೊಂಡಿದ್ದಾರೆ. ಇನ್ನೊಂದಡೆ ಇದ್ಯಾವುದನ್ನು ಕೇಳದೇ ಕಂದಾಯ ಅಧಿಕಾರಿಗಳು ಶಾಲೆ ಸೀಝ್ ಮಾಡಿ ಬೀಗ ಜಡಿದರು.

ಐಎಂಎ ನಡೆಸುತ್ತಿದ್ದ ಸ್ಕೂಲ್ ಅನ್ನು ಇಂದು ಅಧಿಕೃತವಾಗಿ ಮುಟ್ಟುಗೋಲು ಹಾಕಿಕೊಂಡು ಬೀಗ ಹಾಕಲಾಯ್ತು. ಆದ್ರೆ ಪೋಷಕರು ಇದರ ವಿರುದ್ಧ ನಮ್ಗೆ ಮಾಹಿತಿ ನೀಡದೇ ಬೀಗ ಹಾಕೋದು ಸರಿಯಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು. ಶಾಲೆಯ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಬಿಗಿಭದ್ರತೆ ನೀಡಲಾಯ್ತು. 

ಈ ಬೆಳವಣಿಗೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಪೋಷಕರಿಗೆ ಹೈಕೋರ್ಟ್ ತೀರ್ಪು ಕೊಂಚ ರಿಲೀಫ್ ಕೊಟ್ಟದೆ. ನೆಹರೂ ಸ್ಕೂಲ್ನ್ನು ಮುಂದಿನ ವಿಚಾರಣೆಯವರೆಗೆ ತೆರೆಯುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಕೊಟ್ಟಿದ್ದು ಆಕ್ಟೋಬರ್ 12 ಕ್ಕೆ ಸದ್ಯ ವಿಚಾರಣೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments