Webdunia - Bharat's app for daily news and videos

Install App

'ನೆರೆ ಛಾಯೆ' ಛಾಯಾಚಿತ್ರ ಪ್ರದರ್ಶನ: ಭೀಕರ ಚಿತ್ರಗಳ ಅನಾವರಣ

Webdunia
ಗುರುವಾರ, 17 ಅಕ್ಟೋಬರ್ 2019 (19:13 IST)
ನೆರೆ ಬಂದು ಲಕ್ಷಾಂತರ ಜನರ ಬದುಕು ಬಿದ್ದಿದೆ. ಇದೀಗ ನಿಧಾನವಾಗಿ ಹೊಸ ಬದುಕು ಅಂಬೆಗಾಲು ಇಡುತ್ತ ಶುರುವಾಗುತ್ತಿದೆ. ಈ ನಡುವೆ ಪ್ರವಾಹ ಸಂತ್ರಸ್ಥರ ಬದುಕು, ಚಿತ್ರಣದ ಪ್ರದರ್ಶನ ಏರ್ಪಡಿಸಲಾಗಿದೆ.

ಹುಬ್ಬಳ್ಳಿಯ ಪತ್ರಿಕಾ ಛಾಯಾಗ್ರಾಹಕರ ವತಿಯಿಂದ ನೆರೆ ಛಾಯಾ ಛಾಯಾಚಿತ್ರ ಪ್ರದರ್ಶನವನ್ನು ಅಕ್ಟೋಬರ್ 19, 20 ಕ್ಕೆ ಇಂದಿರಾ ಗಾಜಿನ ಮನೆಯಲ್ಲಿ ಪ್ರದರ್ಶನ ಮಾಡಲಾಗುತ್ತಿದೆ. ಹೀಗಂತ ಕಿರಣ ಬಾಕಳೆ ಹೇಳಿದ್ದಾರೆ.

ಛಾಯಾ ಚಿತ್ರ ಪ್ರದರ್ಶನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟನೆ ಮಾಡಲಿದ್ದಾರೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ, ಶಾಸಕ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಪ್ರದೀಪ ಶೆಟ್ಟರ್, ಶ್ರೀನಿವಾಸ ಮಾನೆ, ಕುಸುಮಾವತಿ ಶಿವಳ್ಳಿ, ಜಿಲ್ಲಾಧಿಕಾರಿ ದೀಪಾ ಚೋಳನ, ಪೊಲೀಸ್ ಆಯುಕ್ತರಾದ ಆರ್. ದಿಲಿಪ್ ಪಾಲ್ಗೊಳ್ಳಲಿದ್ದಾರೆ.

ಛಾಯಾಗ್ರಹಣ ಮಾಡಿದ ಕಲಾವಿದರು ತಮ್ಮ ಜೀವದ ಹಂಗು ತೊರೆದು ನೆರೆ ಚಿತ್ರಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆ ಹಿಡಿದಿದ್ದಾರೆ. ಪ್ರದರ್ಶನಕ್ಕೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments