ಮೊಸಳೆ ಕಾಟದಿಂದ ಜೀವ ಕೈಯಲ್ಲಿ ಹಿಡಿದಿರೋ ನೆರೆ ಸಂತ್ರಸ್ಥರು

Webdunia
ಮಂಗಳವಾರ, 10 ಸೆಪ್ಟಂಬರ್ 2019 (16:56 IST)
ಪ್ರವಾಹ ಪರಿಸ್ಥಿತಿ ಗಡಿ ಜಿಲ್ಲೆಯ ಜನರ ಬದುಕನ್ನು ನರಕವಾಗಿಸಿದರೆ, ನೆರೆ ಇಳಿಯುತ್ತಿರುವ ಕೆಲವೆಡೆ ಮೊಸಳೆಗಳು ಜೀವ ಭಯ ಹುಟ್ಟಿಸುತ್ತಿವೆ.

ಜನ ವಸತಿಯಡೆ ಮೋಸಳೆಗಳು ಕಂಡು ಬರುತ್ತಿರೋದು ಜನರಲ್ಲಿ ಆತಂಕ ಉಂಟು ಮಾಡಿದೆ. ಕೃಷ್ಣಾ ನದಿಯ ಪ್ರವಾಹಕ್ಕೆ ನದಿಯ‌ ನೀರಿನ ಮಟ್ಟದಲ್ಲಿ ಏರಿಕೆಯಾದ‌ ಪರಿಣಾಮ ಆಹಾರ ಅರಸುತ್ತಾ ಜನವಸತಿ ಪ್ರದೇಶದತ್ತ ಮೊಸಳೆಗಳು ಬರುತ್ತಿವೆ. ಇವುಗಳನ್ನು ಗ್ರಾಮಸ್ಥರು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ಸತ್ತಿ ಗ್ರಾಮದ ನಂದೇಶ್ವರ ರಸ್ತೆಗೆ ಹೊಂದಿಕೊಂಡಿರುವ ಅತ್ತಾರ ಜನವಸತಿಯಲ್ಲಿ ಮೊಸಳಗಳು ಕಂಡು ಬಂದಿವೆ. ತೋಟದಲ್ಲಿ ಕೆಲಸ ಮಾಡುತ್ತಿರುವವರಿಗೆ ವಿಚಿತ್ರ ಧ್ವನಿ ಕೇಳಲಾರಂಭಿಸಿದೆ. ಆಗ ಅದನ್ನು ಗಮನಿಸಿದ ಜನವಸತಿ ಪ್ರದೇಶದ ಜನರು ಮೊಸಳೆನ್ನು ಗುರುತಿಸಿ ಹಿಂಬಾಲಿಸಿ ಹಗ್ಗದಿಂದ ಕಟ್ಟಿ ಹಾಕಿದ್ದಾರೆ.  

ಕೃಷ್ಣಾ ನದಿಯ ಪ್ರವಾಹದಿಂದ ಕಂಗಾಲಾಗಿರುವ ಜನರಿಗೆ ಹಾವು, ಕ್ರೀಮಿಕಿಟಗಳ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಈ ಮೊಸಳೆಗಳಂತ ದೊಡ್ಡ ಪ್ರಾಣಿಗಳಿಂದಾಗಿ ನದಿ ದಂಡೆಯ ಜನರು ಭಯಭೀತರಾಗಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments