Webdunia - Bharat's app for daily news and videos

Install App

ಬರದ ಗಾಯದ ಮೇಲೆ ನೆರೆಯ ಬರೆ, ಬೀದಿಗೆ ಬಿದ್ದ ಸಂತ್ರಸ್ಥರ ಬದುಕು

Webdunia
ಬುಧವಾರ, 21 ಆಗಸ್ಟ್ 2019 (20:01 IST)
ಆ ಗ್ರಾಮಗಳಲ್ಲಿ ಸಂಜೆಯಾದರೆ ಸಾಕು ಕವಿಯುವ ಕತ್ತಲೆ, ರಾತ್ರಿಯಾದರೆ ಸಾಕು ಸೊಳ್ಳೆಗಳ ಕಾಟ, ಉಸಿರಾಡುವ ಗಾಳಿಯೂ ವಿಷಗಾಳಿಯಿಂದ ಕಲುಷಿತ, ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಳವರೆಗೆ ನಿತ್ಯದ ಅಲೆದಾಟ.

ಬೆಳಗಾವಿ ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದಷ್ಟೇ ಆವರಿಸಿದ್ದ ಬರದ ಗಾಯದ ಮೇಲೆ ಉಪ್ಪು ಸುರಿದಂತೆ ಕಳೆದ ಇಪ್ಪತ್ತು ದಿನಗಳಲ್ಲಿ ಪ್ರವಾಹದ ಭೀಕರತೆಯನ್ನು ತಂದ ವರುಣ ಅಕ್ಷರಶಃ ಕೃಷ್ಣಾ ನದಿ ತೀರದ ನೆರೆ ಸಂತ್ರಸ್ಥರನ್ನು ಬೀದಿಗೆ ತಳ್ಳಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಸದ್ಯ ತಂಗಡಿ, ಶಿನಾಳ, ಕಾತ್ರಾಳ ಮತ್ತು ಮೋಳೆ ಗ್ರಾಮಗಳ ತೋಟದ ವಸತಿಯ ನೂರಕ್ಕೂ ಹೆಚ್ಚು  ಕುಟುಂಬಗಳು ಬದುಕು ಕಟ್ಟಿಕೊಳ್ಳಲು ಪರದಾಡುತ್ತಿವೆ.

ರಸ್ತೆ ಪಕ್ಕದ ಎರಡು ಬದಿಗಳಲ್ಲಿ ದನಕರುಗಳನ್ನು ಕಟ್ಟಿ, ಮನೆಯ ಮಹಿಳೆಯರು, ಮಕ್ಕಳು, ವಯೋವೃದ್ದರ ಜೊತೆಗೆ ತಗಡಿನ ಶೆಡ್ಡುಗಳನ್ನೆ ಆಸರೆ ಮಾಡಿಕೊಂಡು ಜನರು ಜೀವನ ಸಾಗಿಸುತ್ತಿರುವದು ಮನಸು ಕಲಕುತ್ತದೆ.

ಇನ್ನೊಂದು ಕಡೆ ಚಿಕ್ಕೋಡಿ ತಾಲೂಕಿನ ಯಡೂರ, ಚಂದೂರ, ಅಂಕಲಿ, ಮಾಂಜರಿ ಗ್ರಾಮಗಳಲ್ಲಿ ಮತ್ತು ರಾಯಭಾಗ ತಾಲೂಕಿನ ಹಲವೆಡೆ ಜನರು ತಮ್ಮ ಮನೆಗಳಿಗೆ ತೆರಳುತ್ತಿದ್ದರೆ ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ವಾಪಸ್ ಆದವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments