ನೇತ್ರಾವತಿ-ಕುಮಾರಧಾರ ಪ್ರವಾಹ

Webdunia
ಭಾನುವಾರ, 10 ಜುಲೈ 2022 (20:04 IST)
ಶಾಂತಗೊಂಡಿದ್ದ ನೇತ್ರಾವತಿ- ಕುಮಾರಧಾರ ನದಿಗಳು ಇಂದು ಮತ್ತೆ ರೌದ್ರವತಾರ ತಾಳಿವೆ. ಭಾನುವಾರ ನಸುಕಿನ ಜಾವದಿಂದಲೇ ಎರಡೂ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳಗೊಂಡಿದ್ದು, ಅಪಾಯದ ಮಟ್ಟ ತಲುಪಿದೆ. ಈಗಾಗಲೇ ನದಿ ಪಾತ್ರದ ಪ್ರದೇಶಗಳು ಜಲಾವೃತಗೊಂಡಿವೆ. ಉಭಯ ನದಿಗಳಲ್ಲಿ ನೀರು ಹೆಚ್ಚಳವಾಗುತ್ತಲೇ ಇದ್ದು 2019ರ ಬಳಿಕ ಮತ್ತೊಮ್ಮೆ ನೆರೆ ಬರುವ ಸಾಧ್ಯತೆ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ನೆರೆ ಭೀತಿ ಮೂಡಿಸಿದ ನೇತ್ರಾವತಿ- ಕುಮಾರಧಾರ ನದಿಗಳು ಶನಿವಾರ ಶಾಂತಗೊಂಡಿದ್ದವು. ಉಭಯ ನದಿಗಳಲ್ಲಿ ನೀರ ಹರಿವು ತೀರಾ ಕಡಿಮೆಯಾಗಿತ್ತು. ಆದರೆ ಶನಿವಾರ ಸಂಜೆಯಿಂದ ನೀರು ಏರಿಕೆಯಾಗುತ್ತಲೇ ಇದ್ದು, ಇಂದು ಅಪಾಯದ ಮಟ್ಟದಲ್ಲಿ ಉಭಯ ನದಿಗಳ ನೀರು ಹರಿಯುತ್ತಿದೆ. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಬಳಿ ಇರುವ 38 ಮೆಟ್ಟಿಲುಗಳಲ್ಲಿ ಒಂದು ಮೆಟ್ಟಿಲಷ್ಟೇ ಕಾಣುತ್ತಿದ್ದು, ಉಳಿದ ಮೆಟ್ಟಿಲುಗಳೆಲ್ಲಾ ಮುಳುಗಿವೆ. ಈ ಒಂದು ಮೆಟ್ಟಿಲು ಮುಳುಗಿದರೆ ನೀರು ದೇವಾಲಯದ ವಠಾರಕ್ಕೆ ಪ್ರವೇಶಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments