ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

Krishnaveni K
ಮಂಗಳವಾರ, 18 ನವೆಂಬರ್ 2025 (10:03 IST)
ಬೆಂಗಳೂರು: ನಿನ್ನೆ ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ದ ಫೋಟೋ ಟ್ವೀಟ್ ಮಾಡಿದ್ದರು. ಆದರೆ ದೇಶದ ಪ್ರಧಾನ ಮಂತ್ರಿ ಮೋದಿ ಭೇಟಿ ಮಾಡಿದ್ದರೂ ಫೋಟೋ ಹಾಕಿಲ್ಲ. ಇದಕ್ಕೆ ನೆಟ್ಟಿಗರೊಬ್ಬರು ಸಿಎಂಗೆ ಪ್ರಶ್ನೆ ಮಾಡಿದ್ದಾರೆ.

ನಿನ್ನೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಫೋಟೋ ಪ್ರಕಟಿಸಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ. ಇದಕ್ಕೆ ಮೊದಲು ಮೋದಿ ಭೇಟಿಯ ವಿಚಾರ ಹಂಚಿಕೊಂಡಿದ್ದರೂ ಅವರ ಜೊತೆಗೆ ಒಂದೇ ಒಂದು ಫೋಟೋ ಪ್ರಕಟಿಸಿಲ್ಲ.

ಇದಕ್ಕೆ ನೆಟ್ಟಿಗರೊಬ್ಬರು ಕಿಡಿ ಕಾರಿದ್ದಾರೆ. ಮೋದಿಯವರ ಜೊತೆ ತೆಗೆಸಿಕೊಂಡು ಒಂದು ಫೋಟೋ ಹಾಕಲಿಕ್ಕೆ ಕೂಡಾ ನಿಮಗೆ ರಾಜಕೀಯ ಅಡ್ಡಿ ಬರುತ್ತಾ? ಏನು ಭಯನಾ ಎಂದು ಕಾಲೆಳೆದಿದ್ದಾರೆ. ಕಳೆದ ಬಾರಿ ಮೋದಿ ಭೇಟಿ ಬಳಿಕ ಸಿದ್ದರಾಮಯ್ಯ ಫೋಟೋ ಪ್ರಕಟಿಸಿದ್ದರು. ಆದರೆ ಈ ಬಾರಿ ಫೋಟೋ ಹಂಚಿಕೊಳ್ಳದೇ ಕೇವಲ ಪತ್ರಗಳನ್ನು, ಸಂದೇಶಗಳನ್ನು ಮಾತ್ರ ಬರೆದುಕೊಂಡಿರುವುದು ಅಚ್ಚರಿ ಉಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments