Webdunia - Bharat's app for daily news and videos

Install App

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Krishnaveni K
ಬುಧವಾರ, 11 ಜೂನ್ 2025 (08:43 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಬಳಿಕ ಮತ್ತೊಮ್ಮೆ ಹೊಸದಾಗಿ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಹಾಗಿದ್ದರೆ ಇದಕ್ಕೆ ಮೊದಲು ಮಾಡಿದ್ದ 150 ಕೋಟಿ ದಂಡ ಆಯ್ತು ಎಂದಿದ್ದಾರೆ.

ರಾಜ್ಯ ಸರ್ಕಾರ ಇತ್ತೀಚೆಗೆ 10 ವರ್ಷಗಳ ಹಿಂದೆ ನಡೆಸಿದ್ದ ಜಾತಿಗಣತಿ ವರದಿಯನ್ನು ಪ್ರಕಟಿಸಿತ್ತು. ಈ ವರದಿ ಅಧಿಕೃತಗೊಳಿಸಲು ಸ್ವಪಕ್ಷೀಯರಿಂದಲೇ ಸಿಎಂ ಸಿದ್ದರಾಮಯ್ಯ ವಿರೋಧ ಎದುರಿಸಿದ್ದರು. ಈ ವರದಿಯಲ್ಲಿರುವ ಅಂಕಿ ಅಂಶಕ್ಕೂ ಈಗಿನ ಜಾತಿವಾರು ಜನಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿದೆ. ಹೀಗಾಗಿ ಪ್ರಮುಖವಾಗಿ ಲಿಂಗಾಯತ, ಒಕ್ಕಲಿಗ ಸಮುದಾಯದವರಿಂದ ವಿರೋಧ ವ್ಯಕ್ತವಾಗಿತ್ತು.

ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು ಇದಾದ ಬಳಿಕ ಮತ್ತೊಮ್ಮೆ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹಳೆಯ ವರದಿಯನ್ನು ಕೈ ಬಿಟ್ಟು ಹೊಸದಾಗಿ ಗಣತಿ ಮಾಡಲಾಗುತ್ತದೆ ಎಂದಿದ್ದಾರೆ.

ಅವರ ಈ ಘೋಷಣೆಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮೊದಲು ರಾಜ್ಯ ಸರ್ಕಾರ ಜಾತಿಗಣತಿ ಮಾಡಲು 150 ಕೋಟಿ ಖರ್ಚು ಮಾಡಿತ್ತು ಎಂದು ವರದಿಯಾಗಿತ್ತು. ಹಾಗಿದ್ದರೆ ಅಂದು ಖರ್ಚು ಮಾಡಿದ ಹಣ ವೇಸ್ಟ್ ಆಯ್ತು. ಇದನ್ನು ಹೇಗೆ ಮರಳಿ ಪಡೆಯುತ್ತೀರಿ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments