Webdunia - Bharat's app for daily news and videos

Install App

ಕೇಂದ್ರ ಕೊಟ್ಟಿದ್ದನ್ನು ನಾವು ಕೊಟ್ಟಿದ್ದು ಅನ್ನೋದು, ದುಡ್ಡಿದ್ರೆ ಕೇಂದ್ರದ ತೆರಿಗೆ ಹಣ ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Krishnaveni K
ಮಂಗಳವಾರ, 15 ಅಕ್ಟೋಬರ್ 2024 (11:57 IST)
ಬೆಂಗಳೂರು: ಜನರಿಗೆ ಉಚಿತ ಗ್ಯಾರಂಟಿಗಳನ್ನು ಕೊಟ್ಟೂ ನಿಮ್ಮ ಬಳಿ ಸಾಕಷ್ಟು ದುಡ್ಡಿದ್ದರೆ ಕೇಂದ್ರ ಹಣ ಕೊಟ್ಟಿಲ್ಲ ಎಂದು ಯಾಕೆ ಕೇಳ್ತೀರಿ ಹೀಗಂತ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಜನ ಪ್ರಶ್ನೆ ಮಾಡಿದ್ದಾರೆ.

ಕೇಂದ್ರದ ವಿರುದ್ಧ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ಕಾರಣಕ್ಕೆ ಹೋರಾಟಕ್ಕೆ ಕರೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ನೆಟ್ಟಿಗರು ಕಿಡಿ ಕಾರಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿದ ಹೊರತಾಗಿಯೂ ನಾವು ಆರ್ಥಿಕವಾಗಿ ಬಲಿಷ್ಠವಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಜನ ನಾನಾ ರೀತಿ ಪ್ರತಿಕ್ರಿಯಿಸಿದ್ದಾರೆ. ನಿಮ್ಮ ಬಳಿ ದುಡ್ಡಿದ್ದರೆ ಕೇಂದ್ರ ಕೊಟ್ಟಿಲ್ಲ ಎಂದು ಯಾಕೆ ದೂಷಿಸುತ್ತಿದ್ದೀರಿ. ಕೇಂದ್ರದಿಂದ ನೀಡುವ ಅಕ್ಕಿಯನ್ನು ನೀವು ಕೊಟ್ಟು ನಿಮ್ಮದೆಂದು ಹೇಳಿ ಕೊಳ್ತೀರಿ, ಪಿಎಂ ಜಲ್ ಯೋಜನೆಯಿಂದ ನೀರು ಕೊಟ್ಟು ನಮ್ಮ ಯೋಜನೆ ಅಂತೀರಿ, ಪಿಎಂ ಆವಾಸ್ ಯೋಜನೆಯಡಿ ಮನೆ ಕಟ್ಟಿಸಿಕೊಟ್ಟು ನಮ್ಮದೆಂದು ಹೇಳಿಕೊಳ್ತೀರಿ ಎಂದು ಇನ್ನೊಬ್ಬರು ಕಾಲೆಳೆದಿದ್ದಾರೆ.

ನಿಮ್ಮ ಗ್ಯಾರಂಟಿ ಯೋಜನೆಗೆ ನಾವು ಬೆಲೆ ತೆತ್ತಿದ್ದೇವೆ. ಗ್ಯಾರಂಟಿ ಯೋಜನೆಯಿಂದಾಗಿ ನಮಗೆ ಕರೆಂಟ್ ಬಿಲ್ ಹೆಚ್ಚಾಯ್ತು, ನೀರಿನ ಬಿಲ್ ಹೆಚ್ಚಾಯ್ತು, ಹಾಲು, ದಿನಸಿ ಎಲ್ಲವೂ ಏರಿಕೆಯಾಯ್ತು. ನಿಮ್ಮ ಗ್ಯಾರಂಟಿಯಿಂದಾಗಿ ನಮಗೆಲ್ಲಾ ಬೆಲೆ ಏರಿಕೆ ಗ್ಯಾರಂಟಿ ಸಿಕ್ಕಿದೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments