Webdunia - Bharat's app for daily news and videos

Install App

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಭವಾನಿ ರೇವಣ್ಣಂಗೆ ಟಿಕೆಟ್ ಕೊಡಿ, ಗೆಲ್ಲೋದು ಪಕ್ಕಾ ಅಂತೆ

Krishnaveni K
ಗುರುವಾರ, 24 ಅಕ್ಟೋಬರ್ 2024 (08:53 IST)
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಚರ್ಚೆಯ ನಡುವೆಯೇ ಜನ ಸೋಷಿಯಲ್ ಮೀಡಿಯಾದಲ್ಲಿ ಭವಾನಿ ರೇವಣ್ಣ ಪರ ಬ್ಯಾಟಿಂಗ್ ಮಾಡಿ ಕಾಲೆಳೆದಿದ್ದಾರೆ.

ಭವಾನಿ ರೇವಣ್ಣ ಇತ್ತೀಚೆಗೆ  ಪುತ್ರ ಪ್ರಜ್ವಲ್ ರೇವಣ್ಣ ಕೇಸ್ ನಿಂದ ಸುದ್ದಿಯಾಗಿದ್ದರು. ಪ್ರಜ್ವಲ್ ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯ ಅಪಹರಣ ಪ್ರಕರಣದಲ್ಲಿ ಭವಾನಿ ವಿರುದ್ಧವೂ ಕೇಸ್ ದಾಖಲಾಗಿತ್ತು. ಇದರ ನಡುವೆ ಅವರು ಬಂಧನ ಭೀತಿಯಲ್ಲಿದ್ದರು. ಆದರೆ ಜಾಮೀನು ಪಡದು ಬಚಾವ್ ಆಗಿದ್ದರು.

ಇದೀಗ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಚರ್ಚೆಯ ನಡುವೆಯೇ ನೆಟ್ಟಿಗರು ಭವಾನಿ ರೇವಣ್ಣ ಹೆಸರನ್ನು ಎಳೆದು ತಂದಿದ್ದಾರೆ. ಚನ್ನಪಟ್ಟಣದಲ್ಲಿ ಓರ್ವ ಮಹಿಳಾ ಅಭ್ಯರ್ಥಿಯನ್ನು ನಿಲ್ಲಿಸಲು ಜೆಡಿಎಸ್ ಚಿಂತನೆ ನಡೆಸಿದೆ ಎಂಬ ಸುದ್ದಿಯ ಬೆನ್ನಲ್ಲೇ ಭವಾನಿ ರೇವಣ್ಣ ಆದರೆ ಸೂಕ್ತ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ.

ಭವಾನಿ ರೇವಣ್ಣ ಅಭ್ಯರ್ಥಿಯಾದರೆ  ಈ ಬಾರಿ ದಾಖಲೆ ಅಂತರದಲ್ಲಿ ಜೆಡಿಎಸ್ ಗೆಲ್ಲಲಿದೆ ಎಂದು ತಮಾಷೆ ಮಾಡಿದ್ದಾರೆ. ಭವಾನಿ ರೇವಣ್ಣ ಕೂಡಾ ರಾಜಕೀಯದಲ್ಲಿ ಪಳಗಿದವರೇ. ಆದರೆ ವಿವಾದಗಳು ಮತ್ತು ಅನಾರೋಗ್ಯದಿಂದ ಹೈರಾಣಾಗಿರುವ ಗೌಡರ ಸೊಸೆ ಈಗ ತಣ್ಣಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ