ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

Krishnaveni K
ಗುರುವಾರ, 3 ಜುಲೈ 2025 (12:28 IST)
ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ ಮನಮೋಹನ್ ಸಿಂಗ್ ಹೆಸರು ಇಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು ಕನ್ನಡಿಗರು ಯಾರೂ ಇರ್ಲಿಲ್ವಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಡಾ. ಮನಮೋಹನ್ ಸಿಂಗ್ ಇದೇ ವರ್ಷ ನಮ್ಮನ್ನಗಲಿದ್ದರು. ಅವರು ಅಗಲಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆಂಗಳೂರು ವಿವಿಗೆ ಅವರ ಹೆಸರಿಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ನಿನ್ನೆ ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ ಎಂದಿದ್ದಾರೆ.

ಆದರೆ ಇದಕ್ಕೆ ನೆಟ್ಟಿಗರು ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿದ್ದು, ಬೆಂಗಳೂರು ವಿವಿಗೆ ಹೆಸರಿಡಲು ಅನೇಕ ಕನ್ನಡ ಸಾಧಕರೇ ಇದ್ದರು. ಅವರ ಹೆಸರಿಡುವ ಬದಲು ಮನಮೋಹನ್ ಸಿಂಗ್ ಹೆಸರಿಟ್ಟಿರುವುದು ಯಾಕೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಪಕ್ಷ ಎಸ್ಎಂ ಕೃಷ್ಣ ಹೆಸರಾದರೂ ಇಡಬಹುದಿತ್ತಲ್ವೇ ಎಂದು ತಕರಾರು ತೆಗೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments