Webdunia - Bharat's app for daily news and videos

Install App

ರೇಣುಕಾಸ್ವಾಮಿ ದೇಶಕ್ಕೋಸ್ಕರ ಪ್ರಾಣ ಕೊಟ್ಟನಾ, ಸರ್ಕಾರಿ ಕೆಲಸ ಯಾಕೆ: ಸಾರ್ವಜನಿಕರಿಂದ ಆಕ್ರೋಶ

Krishnaveni K
ಬುಧವಾರ, 26 ಜೂನ್ 2024 (12:19 IST)
ಬೆಂಗಳೂರು: ತಮ್ಮನ್ನು ಭೇಟಿಯಾದ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದ ಭರವಸೆಯಿತ್ತ ಸಿಎಂ ಸಿದ್ದರಾಮಯ್ಯ ನಿರ್ಧಾರದ ಬಗ್ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ದರ್ಶನ್ ಆಂಡ್ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಕುಟುಂಬಕ್ಕೆ ಈಗ ಆಧಾರವಿಲ್ಲದಂತಾಗಿದೆ. ಮನಗೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪೋಷಕರು, ಗರ್ಭಿಣಿ ಪತ್ನಿ ಮತ್ತು ವಯೋವೃದ್ಧ ಅಜ್ಜಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ.

ಈಗಾಗಲೇ ಕೆಲವು ಸಂಘ-ಸಂಸ್ಥೆಗಳು ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಆರ್ಥಿಕ ನೆರವು ನೀಡಿದೆ. ನಿನ್ನೆ ರೇಣುಕಾ ತಂದೆ ಮತ್ತು ತಾಯಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಈ  ವೇಳೆ ತಮ್ಮ ಪುತ್ರಿ ಅಥವಾ ಸೊಸೆಗೆ ಅನುಕಂಪದ ಆಧಾರದಲ್ಲಿ ಸರ್ಕಾರೀ ಉದ್ಯೋಗ ನೀಡಲು ಮನವಿ ಮಾಡಿದ್ದಾರೆ.

ಇದಕ್ಕೆ ಸಿದ್ದರಾಮಯ್ಯ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಗತ್ಯ ದಾಖಲೆಗಳನ್ನು ಕಳುಹಿಸಿಕೊಡಲು ತಿಳಿಸಿದ್ದಾರೆ ಎಂದು ರೇಣುಕಾಸ್ವಾಮಿ ತಂದೆ ಮಾಧ್ಯಮಗಳಿಗೆ ಹೇಳಿದ್ದಾರೆ. ಆದರೆ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸರ್ಕಾರೀ ಉದ್ಯೋಗ ನೀಡುವ ಬಗ್ಗೆ ಸಾರ್ವಜನಿಕರು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments