ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

Krishnaveni K
ಸೋಮವಾರ, 14 ಜುಲೈ 2025 (16:53 IST)
ಬೆಂಗಳೂರು: ಸಿಗಂದೂರಿನಲ್ಲಿ ಇಂದು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ನನಗೆ ತಡವಾಗಿ ಆಹ್ವಾನ ನೀಡಲಾಯಿತು ಎಂದು ತಗಾದೆ ತೆಗೆದಿರುವ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ನೂರೆಂಟು ಪ್ರಶ್ನೆ ಮಾಡಿದ್ದಾರೆ.

ಸೇತುವೆ ಉದ್ಘಾಟನೆಗೆ ನನಗೆ ಮೊದಲೇ ಹೇಳಿಲ್ಲ. ಕೊನೆಯ ಕ್ಷಣದಲ್ಲಿ ಆಹ್ವಾನ ನೀಡಲಾಯಿತು ಎಂಬುದು ಸಿಎಂ ಸಿದ್ದರಾಮಯ್ಯ ಅವರ ಆರೋಪವಾಗಿದೆ. ಇದೇ ವಿಚಾರವಾಗಿ ಈಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಕೂಡಾ ನಡೆದಿದೆ.

ಇದಕ್ಕೆ ಈಗ ನೆಟ್ಟಿಗರು ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.  ಈ ಹಿಂದೆ ಐಪಿಎಲ್ ಸಂಭ್ರಮಾಚರಣೆಗೆ ಕೊನೆಯ ಕ್ಷಣದಲ್ಲಿ ಆಹ್ವಾನವಿತ್ತರೂ ಹೋಗಿದ್ದಿರಿ. ಈಗ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾತ್ರ ನಿಮಗೆ ಕೊನೆಯ ಕ್ಷಣದಲ್ಲಿ ಆಹ್ವಾನ ನೀಡಿದರೆ ಅದು ಕೊರತೆಯಾಗುತ್ತದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಮತ್ತೆ ಕೆಲವರು ಎಲ್ಲವೂ ಆದ್ಯತೆಗೆ ಅನುಗುಣವಾಗಿರುತ್ತದೆ. ನಿಜವಾಗಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದಿದ್ದರೆ ಇಂದಿನ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಹೋಗುವ ಮೊದಲು ಒಂದು ಕ್ಷಣ ಬಂದು ಹೋಗಬಹುದಿತ್ತಲ್ಲವೇ? ಅದಕ್ಕಾಗಿ ಇಷ್ಟು ರಾಜಕೀಯ ಆರೋಪ-ಪ್ರತ್ಯಾರೋಪಗಳು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಸಿಗಂದೂರು ಸೇತುವೆ ಎನ್ನುವುದು ಅಲ್ಲಿನ ಸ್ಥಳೀಯರ ಕನಸು. ಎಷ್ಟೋ ವರ್ಷಗಳ ಸಂಕಷ್ಟಕ್ಕೆ ಸಿಗುತ್ತಿರುವ ಪರಿಹಾರ. ಅಲ್ಲಿನವರು ಅದ್ಧೂರಿ ಉದ್ಘಾಟನೆ ಬಯಸಲಿಲ್ಲ. ಅವರಿಗೆ ತಮ್ಮ ಸಂಪರ್ಕಕ್ಕೆ ಬೇಗನೇ ಒಂದು ಸೇತುವೆಯಾದರೆ ಸಾಕಿತ್ತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಮುಂದಿನ ಸುದ್ದಿ
Show comments