ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ನಿಂತು ನಮ್ಮ ದುಡ್ಡು ಯಾಕೆ ವೇಸ್ಟ್ ಮಾಡ್ತೀರಿ: ಡಿಕೆ ಶಿವಕುಮಾರ್ ಗೆ ಜನರಿಂದ ತರಾಟೆ

Krishnaveni K
ಗುರುವಾರ, 20 ಜೂನ್ 2024 (14:10 IST)
ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ ಬಳಿಕ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾನೇ ಸ್ಪರ್ಧಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಚನ್ನಪಟ್ಟಣಕ್ಕೆ ನಡೆಯುತ್ತಿರುವುದು ಉಪಚುನಾವಣೆ. ಡಿಕೆ ಶಿವಕುಮಾರ್ ಈಗಾಗಲೇ ಕನಕಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಹೀಗಾಗಿ ಒಂದು ವೇಳೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದರೆ ಡಿಕೆ ಶಿವಕುಮಾರ್ ಮತ್ತೆ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ.

ಆಗೊಂದು ವೇಳೆ ಅವರು ಚನ್ನಪಟ್ಟಣವನ್ನು ಆಯ್ಕೆ ಮಾಡಿದರೂ ಕನಕಪುರಕ್ಕೆ ಮತ್ತೊಮ್ಮೆ ಉಪ ಚುನಾವಣೆ ನಡೆಸಬೇಕಾಗುತ್ತದೆ. ಇದು ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಡಿಕೆಶಿಯನ್ನು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ಈಗಾಗಲೇ ಶಾಸಕರಾಗಿರುವ ನೀವು ಉಪ ಚುನಾವಣೆ ನಿಂತು ಸೋತರೆ ನಮಗೆ ತೊಂದರೆಯಿಲ್ಲ. ಗೆದ್ದರೆ ಮತ್ತೊಮ್ಮೆ ಉಪ ಚುನಾವಣೆ ನಡೆಸಬೇಕಾಗುತ್ತದೆ. ಇದೇನು ಆಟವೇ? ಈ ರೀತಿ ಪದೇ ಪದೇ ಚುನಾವಣೆ ಮಾಡಲು ನಮ್ಮ ತೆರಿಗೆ ದುಡ್ಡು ಯಾಕೆ ದಂಡ ಮಾಡುತ್ತಿದ್ದೀರಿ? ನೀವು ಈಗಾಗಲೇ ಉಪಮುಖ್ಯಮಂತ್ರಿಯಾಗಿದ್ದೀರಿ. ಚನ್ನಪಟ್ಟಣದಲ್ಲಿ ಬೇರೆಯವರಿಗೆ ಅವಕಾಶ ಕೊಡಿ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments