Webdunia - Bharat's app for daily news and videos

Install App

ಲಾಕ್ ಡೌನ್ ಆದ್ರೆ ನಾವೇನು ಮಾಡ್ಬೇಕು? ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ನೆಟ್ಟಿಗರ ಕಿಡಿ

Webdunia
ಮಂಗಳವಾರ, 20 ಏಪ್ರಿಲ್ 2021 (09:12 IST)
ಬೆಂಗಳೂರು: ಕೊರೋನಾ ಪ್ರಕರಣ ಹೆಚ್ಚುತ್ತಿರುವ ಕಾರಣ ಜನರು ಲಾಕ್ ಡೌನ್ ಭೀತಿಯಲ್ಲಿದ್ದಾರೆ. ಒಂದು ವೇಳೆ ಲಾಕ್ ಡೌನ್ ಮಾಡುವುದಾಗಿ ಸರ್ಕಾರ ಮುನ್ಸೂಚನೆ ಕೊಟ್ಟರೂ ತಮ್ಮ ತಮ್ಮ ಊರಿಗೆ ಹೋಗಲು ಸರ್ಕಾರಿ ಬಸ್ ಗಳೇ ಇಲ್ಲ ಎಂಬ ಸ್ಥಿತಿ ಆಗಿದೆ.

 

ಹೀಗಾಗಿ ಸಾರಿಗೆ ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ನೆಟ್ಟಿಗರು ಸಾಮಾಜಿಕ ಜಾಲತಾಣದ ಮೂಲಕ ಕಿಡಿ ಕಾರುತ್ತಿದ್ದಾರೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ನೀವು ಹೀಗೇ ಮುಷ್ಕರ ಮಾಡುತ್ತಿದ್ದರೆ ಲಾಕ್ ಡೌನ್ ಆದಾಗ ನಾವು ಊರಿಗೆ ತೆರಳೋದು ಹೇಗೆ? ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೆ ಕೆಲವರು ಕೆಎಸ್ ಆರ್ ಟಿಸಿ, ಬಿಎಂಟಿಸಿ ನೌಕರರು ಹಸಿರು ಶಾಲು ಹಾಕಿರುವ ಇವರ ಮಾತು ಕೇಳಿಕೊಂಡು ಮುಂದೊಂದು ದಿನ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇನ್ನು ಕೆಲವರು ಇವರ ಮುಷ್ಕರದಿಂದ ಜನರು ಓಡಾಡುವುದು ಕಡಿಮೆಯಾಗಿ ಪರೋಕ್ಷವಾಗಿ ಕೊರೋನಾ ಪ್ರಕರಣ ಕಡಿಮೆಯಾಗಲು ಸಹಾಯವಾಗಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments