Webdunia - Bharat's app for daily news and videos

Install App

ಪತ್ನಿ ಲೆಟರ್ ಬರೆದಿದ್ದು ನಿಮಗೊತ್ತಿಲ್ವಾ: ಎಂಥಾ ನಾಟಕ ಮಾಡ್ತೀರಿ ಸಿದ್ದರಾಮಯ್ಯ ಎಂದ ನೆಟ್ಟಿಗರು

Krishnaveni K
ಮಂಗಳವಾರ, 1 ಅಕ್ಟೋಬರ್ 2024 (10:50 IST)
ಬೆಂಗಳೂರು: ಮುಡಾ ಹಗರಣದಲ್ಲಿ ಪತಿ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಪಾರ್ವತಿ ಸಿದ್ದರಾಮಯ್ಯ 14 ಸೈಟುಗಳನ್ನೂ ಹಿಂಪಡೆಯುವಂತೆ ಮುಡಾಗೆ ಪತ್ರ ಬರೆದಿದ್ದಾರೆ. ಈ ಪತ್ರದ ಬಗ್ಗೆ ನನಗೇ ಆಶ್ಚರ್ಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅವರ ಪ್ರತಿಕ್ರಿಯೆಗೆ ನೆಟ್ಟಿಗರು ಕಿಡಿ ಕಾರಿದ್ದಾರೆ.

ನಿಮ್ಮ ಪತ್ನಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದೇ ಇಲ್ಲ ಅಂತೀರಿ. ಅಂತಹವರು ಪತ್ರ ಬರೆದಿದ್ದು ನಿಮಗೇ ಗೊತ್ತಿಲ್ವಾ? ನಿಮ್ಮನ್ನು ಕೇಳದೇ ಈ ನಿರ್ಧಾರ ಮಾಡುತ್ತಾರಾ? ನಮ್ಮ ಕಿವಿ ಮೇಲೆ ಹೂ ಇಡಬೇಡಿ ಸಾರ್ ಎಂದಿದ್ದಾರೆ. ಒಂದು ವೇಳೆ ನೀವು ತಪ್ಪು ಮಾಡಿಲ್ಲ ಎಂದಾದರೆ ಈ ನಾಟಕ ಎಲ್ಲಾ ಯಾಕೆ? ಸೈಟು ಹಿಂದಿರುಗಿಸುತ್ತಿರುವುದು ಯಾಕೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಈ ಹಿಂದೆ ವಾಚ್ ಕೂಡಾ ಅಷ್ಟೇ. ನಿಮ್ಮ ಮೇಲೆ ಅಪವಾದ ಬಂದಾಗ ಹಿಂದಿರುಗಿಸಿದಿರಿ. ತಪ್ಪು ಮಾಡಿಲ್ಲ ಎಂದಾದರೆ ಭಯ ಯಾಕೆ? ಎಲ್ಲಿ ನಿಮ್ಮ ಬೇರೆ ಅಕ್ರಮ ಆಸ್ತಿಗಳೂ ಬೆಳಕಿಗೆ ಬರಬಹುದು ಎಂಬ ಭಯಕ್ಕೆ ಈ ಸೈಟುಗಳನ್ನು ಹಿಂದಿರುಗಿಸುತ್ತಿದ್ದೀರಿ ಅಲ್ವಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಇಷ್ಟೆಲ್ಲಾ ನಾಟಕವಾಡುವ ಬದಲು ರಾಜೀನಾಮೆ ನೀಡಿ ತನಿಖೆ ಎದುರಿಸಬಹುದಲ್ಲವೇ? ತಪ್ಪು ಮಾಡಿಲ್ಲ ಎಂದಾದರೆ ತರಾತುರಿಯಲ್ಲಿ ಅಧಿಕಾರಿಗಳೊಂದಿಗೆ, ಕ್ಯಾಬಿನೆಟ್ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸುತ್ತಿರುವುದು ಯಾಕೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments