Webdunia - Bharat's app for daily news and videos

Install App

ಗ್ಯಾರಂಟಿ ಹೊರೆ ಅಲ್ಲಾಂದ್ರೆ ಬೆಲೆ ಏರಿಕೆ ಯಾಕೆ ಮಾಡ್ತೀರಿ: ಸಿದ್ದರಾಮಯ್ಯಗೆ ಪ್ರಶ್ನೆ

Krishnaveni K
ಶುಕ್ರವಾರ, 10 ಜನವರಿ 2025 (12:44 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ಅಭಿವೃದ್ಧಿಗೆ ಹಣ ಕೊರತೆಯಾಗಿದೆಯೇ ನೋ ವೇ ಛಾನ್ಸೇ ಇಲ್ಲ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ. ಇದಕ್ಕೆ ನೆಟ್ಟಿಗರ ಪ್ರತಿಕ್ರಿಯೆ ಏನು ನೋಡಿ.

ಸಿಎಂ ಸಿದ್ದರಾಮಯ್ಯ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಗ್ಯಾರಂಟಿಯಿಂದಾಗಿ ಕರ್ನಾಟಕದ ಅಭಿವೃದ್ಧಿಗೆ ಅಡ್ಡಿಯಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿಡಿಯೋವೊಂದನ್ನು ಪ್ರಕಟಿಸಿ ಗ್ಯಾರಂಟಿ ಬಗ್ಗೆ ನೈಜ ಸತ್ಯವೇನು ಎಂದು ಬರೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕದ ಅಭಿವೃದ್ಧಿಗೆ ಯಾವುದೇ ಸಮಸ್ಯೆಯಾಗಿಲ್ಲ. ನೈಜ  ವಿಚಾರವೇನೆಂದರೆ ಗ್ಯಾರಂಟಿ ನಮ್ಮ ಬಜೆಟ್ ನ ಕೇವಲ 14% ಹಣವನ್ನು ಮಾತ್ರ ವಿನಿಯೋಗ ಮಾಡುತ್ತಿದೆ. ಇದು ನಮಗೆ ಭರಿಸಲಾಗದ ಖರ್ಚೇನೂ ಅಲ್ಲ ಎಂದು ಹೇಳಿಕೊಂಡಿದ್ದಾರೆ.

ಆದರೆ ಇದಕ್ಕೆ ನೆಟ್ಟಿಗರು ಮಾತ್ರ ಸಖತ್ ಕೌಂಟರ್ ಕೊಟ್ಟಿದ್ದಾರೆ. ಕರ್ನಾಟಕದ ಬಜೆಟ್ ಇರುವುದೇ 3 ಲಕ್ಷ ಕೋಟಿ. ಇದರಲ್ಲಿ 59000 ಕೋಟಿ ರೂ. ಗ್ಯಾರಂಟಿಗೆ ಬಳಕೆಯಾಗುತ್ತಿದೆ. ಅಂದರೆ ಅದು ಶೇ.14 ಅಲ್ಲ, ಶೇ.20 ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.  ಚೆನ್ನಾಗಿ ಹೇಳ್ತಿದ್ದೀರಿ, ಒಮ್ಮೆ ಇಡೀ ಬೆಂಗಳೂರು ರೌಂಡ್ಸ್ ಬಂದು ನೋಡಿ. ಯಾವ ರಸ್ತೆ ಎಷ್ಟು ಹದಗೆಟ್ಟಿದೆ ಗೊತ್ತಾಗುತ್ತದೆ. ಮುಂದೊಂದು ದಿನ ಇದೇ ಗ್ಯಾರಂಟಿ ನಮ್ಮನ್ನು ದಿವಾಳಿ ಮಾಡುತ್ತದೆ. ಆಗ ಜನಕ್ಕೆ ಬುದ್ಧಿ ಬರುತ್ತದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಜವಾಗಿ ಗ್ಯಾರಂಟಿ ಹೊರೆ ಅಲ್ಲದೇ ಇದ್ದರೆ ಬೆಲೆ ಏರಿಕೆ ಯಾಕೆ ಮಾಡುತ್ತಿದ್ದೀರಿ ಎಂದೂ ಹಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

ಮುಂದಿನ ಸುದ್ದಿ
Show comments