ನಿಮ್ಮ ತಾಯಿ ಸಾವಿನ ತನಿಖೆಯೂ ಆಗ್ಲಿ: ಬಿವೈ ವಿಜಯೇಂದ್ರಗೆ ಸಲಹೆ

Krishnaveni K
ಸೋಮವಾರ, 21 ಅಕ್ಟೋಬರ್ 2024 (16:23 IST)
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ನಿ ಸಾವಿಗೆ ಶೋಭಾ ಕರಂದ್ಲಾಜೆ ಕಾರಣ ಎಂದಿದ್ದ ಸಚಿವ ಭೈರತಿ ಸುರೇಶ್ ವಿರುದ್ಧ ಬಿಎಸ್ ವೈ ಪುತ್ರ ಬಿವೈ  ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ವಿಜಯೇಂದ್ರಗೆ ನೆಟ್ಟಿಗರು ನಿಮ್ಮ ತಾಯಿಯ ಸಾವಿನ ತನಿಖೆಯಾಗಲಿ ಎಂದು ಸಲಹೆ ನೀಡಿದ್ದಾರೆ.

ಶೋಭಾ ಕರಂದ್ಲಾಜೆ ವಿರುದ್ಧ ಭೈರತಿ ಸುರೇಶ್ ನಡೆಸಿರುವ ಗಂಭೀರ ಆರೋಪಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಬಿಜೆಪಿ ಘಟಕ ಮತ್ತು ಬಿವೈ ವಿಜಯೇಂದ್ರ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಭೈರತಿ ಸುರೇಶ್ ಒಬ್ಬ ದರೋಡೆಕೋರ ಎಂದು ಶೋಭಾ ಆರೋಪಿಸಿದ್ದರು. ಅಲ್ಲದೆ, ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಭೈರತಿ ಸುರೇಶ್ ಕಾರಣ ಎಂದಿದ್ದರು.

ಇದರ ಬೆನ್ನಲ್ಲೇ ಬಿವೈ ವಿಜಯೇಂದ್ರ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದರು. ಭೈರತಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಲಿ. ಸಭ್ಯತೆ ಮೀರಿ ಮಾತನಾಡಬಾರದು ಎಂದು ಸುದೀರ್ಘವಾಗಿ ಟ್ವೀಟ್ ಮಾಡಿ ಭೈರತಿ  ಸುರೇಶ್ ವಿರುದ್ಧ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ನಿಮ್ಮ ತಾಯಿಯ ಸಾವಿನ ತನಿಖೆಯೂ ಆಗಲಿ ಬಿಡಿ. ಅದಕ್ಕಾದರೂ ಭೈರತಿ ಸುರೇಶ್ ಗೆ ಬೆಂಬಲ ಕೊಡಿ. ನಾವೂ ಇಂತಹದ್ದೊಂದು ಮಾತನ್ನು ಬಹಳ ಸಮಯದಿಂದ ಕೇಳುತ್ತಲೇ ಇದ್ದೇವೆ. ಹೀಗಾಗಿ ಎಲ್ಲವೂ ತನಿಖೆಯಾಗಲಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments