Webdunia - Bharat's app for daily news and videos

Install App

ನಮ್ಗೆ ಅರಶಿನ ಕುಂಕುಮ ಅಂತ 50 ರೂ. ನೀಡಿದ್ರೆ ಹೆಚ್ಚು; ಸಿದ್ದರಾಮಯ್ಯನವರೇ ನೀವು ಬಿಡಿ ಅಂತಿದ್ದಾರೆ ಜನ

Krishnaveni K
ಬುಧವಾರ, 3 ಜುಲೈ 2024 (09:30 IST)
ಬೆಂಗಳೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾ ಮೂಲಕ ಜನ ನಾನಾ ರೀತಿಯ ಕಾಮೆಂಟ್ ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳ ಪತ್ನಿ ಪಾರ್ವತಿ ಹೆಸರಿನಲ್ಲಿ ನಿಯಮಬಾಹಿರವಾಗಿ ಸೈಟು ವರ್ಗಾವಣೆಯಾಗಿದೆ ಎಂದು ಆರೋಪ ಕೇಳಿಬಂದಿತ್ತು. ಇದರ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಇದು ಬಿಜೆಪಿ ಕಾಲದಲ್ಲೇ ಆಗಿದ್ದು. ನನ್ನ ಬಾಮೈದುನನ ಹೆಸರಿನಲ್ಲಿದ್ದ ಜಾಗವನ್ನು ಆತ ನನ್ನ ಹೆಂಡತಿಗೆ ಅರಶಿನ ಕುಂಕುಮ ರೂಪದಲ್ಲಿ 1 ಎಕರೆಯಷ್ಟು ದಾನ ಮಾಡಿದ್ದ ಎಂದಿದ್ದರು.

ಇದರ ಬಗ್ಗೆ ಈಗ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ನಮಗೆಲ್ಲಾ ಅರಶಿನ ಕುಂಕುಮ ಎಂದರೆ ಐವತ್ತೋ ನೂರೋ ಕೊಟ್ಟು ಕೈ ತೊಳೆದುಕೊಳ್ಳುತ್ತಾರೆ. ಆದರೆ ನಿಮಗೆ ಬಿಡಿ, ಅರಶಿನ ಕುಂಕುಮ ಎಂದು ಸೈಟ್ ನ್ನೇ ಕೊಡುತ್ತಾರೆ. ನಿಮ್ಮ ಲೆವೆಲ್ಲೇ ಬೇರೆ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಮತ್ತೆ ಕೆಲವರು ಇದು ಜಸ್ಟ್ ಅರಶಿನ ಕುಂಕುಮವಷ್ಟೇ. ದಯವಿಟ್ಟು ಯಾರೂ ಸಿಎಂ ಪ್ರಶ್ನೆ ಮಾಡ್ಬೇಡಿ ಎಂದು ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ.

ವಾಲ್ಮೀಕಿ ಹಗರಣದ ಬಳಿಕ ಮುಡಾ ಹಗರಣ ರಾಜ್ಯ ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ಅವರ ಕುಟುಂಬದವರ ಹೆಸರೂ ಕೇಳಿಬಂದಿದೆ. 4000 ಕೋಟಿ ರೂ. ಮೌಲ್ಯದ ಈ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments