Webdunia - Bharat's app for daily news and videos

Install App

ಬೀದಿ ನಾಯಿಗಳಿಗೆ ಬಿರಿಯಾನಿ ಭಾಗ್ಯ: ಮುಂದೆ ಗ್ಯಾರಂಟಿ ಭಾಗ್ಯನೂ ಸಿಗುತ್ತಾ ಅಂದ ನೆಟ್ಟಿಗರು

Krishnaveni K
ಶುಕ್ರವಾರ, 11 ಜುಲೈ 2025 (12:36 IST)
ಬೆಂಗಳೂರು: ಬೆಂಗಳೂರಿನಲ್ಲಿರುವ ಬೀದಿ ನಾಯಿಗಳಿಗೆ ಇನ್ನು ರಾಜಯೋಗ. ನಗರದ ಬೀದಿ ನಾಯಿಗಳಿಗೆ ಬಿರಿಯಾನಿ, ಎಗ್ ರೈಸ್ ನಂತಹ ಆಹಾರ ಒದಗಿಸಲು ಬಿಬಿಎಂಪಿಯೇ ಟೆಂಡರ್ ಕರೆದಿದೆ. ಬಿಬಿಎಂಪಿಯ ಈ ಯೋಜನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಟ್ರೋಲ್ ಮಾಡಿದ್ದು ಮುಂದೆ ಗ್ಯಾರಂಟಿ ಭಾಗ್ಯನೂ ಇರುತ್ತಾ ಎಂದು ಕಾಲೆಳೆದಿದ್ದಾರೆ.

ಬೆಂಗಳೂರಿನಲ್ಲಿ ಸುಮಾರು 3 ಲಕ್ಷ ಬೀದಿ ನಾಯಿಗಳಿವೆ. ಇವುಗಳಿಗೆ ಪ್ರತಿನಿತ್ಯ ಆಹಾರ ಒದಗಿಸಲು ಮಾನವೀಯತೆಯ ದೃಷ್ಟಿಯಿಂದ ಬಿಬಿಎಂಪಿ ಯೋಜನೆ ಹಮ್ಮಿಕೊಂಡಿದೆ. ಪ್ರಾಯೋಗಿಕವಾಗಿ ಈಗಾಗಲೇ ಕೆಲವೆಡೆ ಆಹಾರ ಒದಗಿಸಿದೆಯಂತೆ.

ಇದೀಗ ನಗರದಾದ್ಯಂತ ಈ ಯೋಜನೆ ಜಾರಿಗೆ ತರಲು ಬಿಬಿಎಂಪಿ 3 ಕೋಟಿ ರೂ.ಗಳ ಟೆಂಡರ್ ಕರೆದಿದೆ. ಬೀದಿ ನಾಯಿಗಳು ಆಹಾರಕ್ಕಾಗಿ ಮನುಷ್ಯರ ಮೇಲೆ ದಾಳಿ ನಡೆಸುವುದನ್ನು ತಪ್ಪಿಸಲು ಇಂತಹದ್ದೊಂದು ಯೋಜನೆ ಹಮ್ಮಿಕೊಂಡಿರುವುದಾಗಿ ಬಿಬಿಎಂಪಿ ಹೇಳಿದೆ.


ಆದರೆ ಬಿಬಿಎಂಪಿಯ ಈ ಯೋಜನೆಯನ್ನು ಕೆಲವರು ವ್ಯಂಗ್ಯ ಮಾಡಿದ್ದಾರೆ. ಮುಂದೆ ನಾಯಿಗಳಿಗೆ ಶಾದಿ ಭಾಗ್ಯ, ಕರೆಂಟ್ ಫ್ರೀ, ಬಸ್ ಫ್ರೀ ಯೋಜನೆಯನ್ನೂ ಮಾಡ್ತೀರಾ ಎಂದು ಕೆಲವರು ತಮಾಷೆ ಮಾಡಿದ್ದಾರೆ. ಮತ್ತೆ ಕೆಲವರು ಬಿರಿಯಾನಿ ಸಿಗ್ಲಿಲ್ಲ ಎಂದರೆ ಮುಂದೊಂದು ದಿನ ಬಿಬಿಎಂಪಿ ಕಚೇರಿ ಎದುರು ಬೀದಿ ನಾಯಿಗಳೆಲ್ಲಾ ಸ್ಟ್ರೈಕ್ ಮಾಡಬೇಕಾದೀತು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments