Webdunia - Bharat's app for daily news and videos

Install App

ರಕ್ಷಾ ಬಂಧನದ ಕುರಿತು ಹಳೆಯ ಕತೆ ಹೇಳಿದ ಸುಧಾಮೂರ್ತಿಯನ್ನು ಟೀಕಿಸಿದ ನೆಟ್ಟಿಗರು: ಕಾರಣವೇನು ನೋಡಿ

Krishnaveni K
ಸೋಮವಾರ, 19 ಆಗಸ್ಟ್ 2024 (12:29 IST)
ಬೆಂಗಳೂರು: ಸಮಾಜ ಸೇವಕಿ, ಲೇಖಕಿ, ಇನ್ ಫೋಸಿಸ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಇಂದು ರಕ್ಷಾ ಬಂಧನ ನಿಮಿತ್ತ ಮಾಡಿದ ಪೋಸ್ಟ್ ಒಂದು ಎಲ್ಲರ ಟೀಕೆಗೆ ಗುರಿಯಾಗಿದೆ. ಅಷ್ಟಕ್ಕೂ ಆ ಪೋಸ್ಟ್ ನಲ್ಲಿ ಅಂತಹದ್ದೇನಿತ್ತು ಇಲ್ಲಿದೆ ವಿವರ.

ರಕ್ಷಾ ಬಂಧನ ನಿಮಿತ್ತ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಸುಧಾ ಮೂರ್ತಿ ಇದರ ಹಿನ್ನಲೆಯನ್ನು ವಿವರಿಸಿದ್ದರು. ರಕ್ಷಾ ಬಂಧನ ಹಬ್ಬ ಆಚರಣೆ ಜಾರಿಗೆ ಬರಲು ರಾಣಿ ಕರ್ಣಾವತಿ ಅಪಾಯದಲ್ಲಿದ್ದಾಗ ರಾಜ ಹುಮಾಯುನ್ ಗೆ ಸಹೋದರತ್ವದ ರಕ್ಷೆ ಕಳುಹಿಸಿ ತನ್ನನ್ನು ಪಾರು ಮಾಡುವಂತೆ ಕೇಳಿಕೊಂಡಳು. ಅಂದಿನಿಂದ ಈ ರಕ್ಷಾ ಬಂಧನ ಹಬ್ಬ ಆಚರಣೆ ಶುರುವಾಯ್ತು ಎಂದು ಸುಧಾಮೂರ್ತಿ ಹೇಳಿಕೊಂಡಿದ್ದಾರೆ.
  
ಆದರೆ ಸುಧಾಮೂರ್ತಿ ಹೇಳಿರುವ ಈ ಕತೆ ನೆಟ್ಟಿಗರ ಟೀಕೆಗೆ ಗುರಿಯಾಗಿದೆ. ನೀವು ನಿಜವಾಗಿಯೂ ಇತಿಹಾಸ ತಿಳಿದುಕೊಂಡೇ ಮಾತನಾಡುತ್ತಿದ್ದೀರಾ? ಒಂದು ವೇಳೆ ಇದೇ ಕಟ್ಟುಕತೆಯನ್ನೇ ನೀವು ಹೇಳುವುದಾದರೆ ನಾನು ಇನ್ನು ಮುಂದೆ ನಿಮ್ಮ ಪುಸ್ತಕಗಳನ್ನು ಓದುವುದನ್ನೇ ನಿಲ್ಲಿಸುತ್ತೇನೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ನಿಮಗೆ ರಕ್ಷಾ ಬಂಧನದ ಹಿನ್ನಲೆ ನಿಜವಾಗಿ ಅರಿಯಬೇಕಿದ್ದರೆ ಕೃಷ್ಣ ಮತ್ತು ದ್ರೌಪದಿಯ ಕತೆ ತಿಳಿಯಿರಿ. ರಕ್ಷಾ ಬಂಧನ ದ್ವಾಪರಯುಗದಲ್ಲೇ ಆರಂಭವಾಗಿತ್ತು. ನಿಮ್ಮಂತಹ ಚಿಂತಕರು, ಲೇಖಕರು, ಗೌರವ ಹೊಂದಿರುವ ವ್ಯಕ್ತಿಗಳು ಇಂತಹ ಕಟ್ಟು ಕತೆಗಳನ್ನು ಪ್ರಚಾರ ಮಾಡುವುದು ನೋಡಿದರೆ ಅಚ್ಚರಿಯಾಗುತ್ತದೆ ಎಂದು ಇನ್ನು ಕೆಲವರು ಕಾಮೆಂಟ್ ಮಾಡಿ ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments