Webdunia - Bharat's app for daily news and videos

Install App

ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಸಿಗುವ ಅರ್ಧದಷ್ಟು ಸಮಯಾವಾದರೂ ಸಾಮಾನ್ಯರಿಗೆ ಕೊಡಿ: ನೆಟ್ಟಿಗರ ಬೇಡಿಕೆ

Krishnaveni K
ಶುಕ್ರವಾರ, 1 ನವೆಂಬರ್ 2024 (09:19 IST)
Photo Credit: X
ಹಾಸನ: ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಾಲಯದಲ್ಲಿ ದರ್ಶನಕ್ಕಾಗಿ ಸ್ಥಳೀಯಾಡಳಿತ ಸುವ್ಯವಸ್ಥೆ ಮಾಡಲು ವಿಫಲವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ
 

ನಿನ್ನೆ ಶಾಸಕ ಎಚ್ ಡಿ ರೇವಣ್ಣ ಮತ್ತು ಪತ್ನಿ ಭವಾನಿ ರೇವಣ್ಣ ಹಾಸನಾಂಬೆಯ ಮುಂದೆ ನಿಂತು ಸಾವಕಾಶವಾಗಿ ಪೂಜೆ ಮಾಡಿದ್ದರು. ಇದಕ್ಕೆ ಮೊದಲು ಬಂದಿದ್ದ ಎಲ್ಲಾ ವಿಐಪಿಗಳಿಗೂ ದೇವಿಯ ಮುಂದೆ ನಿಂತು ಸಾವಕಾಶವಾಗಿ ಪೂಜೆ ಮಾಡಲು ಅವಕಾಶ ನೀಡಲಾಗಿದೆ. ಇದು ಸಾಮಾನ್ಯ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತೆ ಕೆಲವರು ಇಂಥಾ ವಿಐಪಿಗಳಿಗೆ ಗಂಟೆಗಟ್ಟಲೆ ಪೂಜೆ ಮಾಡಲು ಅವಕಾಶ ಕೊಡ್ತೀರಿ. ಆದರೆ ನಿಜವಾಗಿಯೂ ಭಕ್ತಿಯಿಂದ ಬರುವ ಸಾಮಾನ್ಯ ಭಕ್ತರಿಗೆ ಒಂದು ಸೆಕೆಂಡು ನಿಂತು ಪ್ರಾರ್ಥನೆ ಮಾಡಲೂ ಅವಕಾಶ ಕೊಡಲ್ಲ. ವಿಐಪಿಗಳು ಎನಿಸಿಕೊಂಡವರು ಇದನ್ನೆಲ್ಲಾ ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿ ಕಾರಿದ್ದಾರೆ.

ಇನ್ನು, ಭಕ್ತರಿಗೆ ವಿಶೇಷ ದರ್ಶನಕ್ಕೆ ಪಾಸ್ ಗಳನ್ನು ನೀಡಲಾಗಿದೆ. ಆದರೆ ಅಲ್ಲೂ ಹಲವು ಸೂಕ್ತ ವ್ಯವಸ್ಥೆಯಿಲ್ಲ. ಪಾಸ್ ಪಡೆದವರೂ ಗಂಟೆ ಗಟ್ಟಲೆ ಕ್ಯೂ ನಿಲ್ಲಬೇಕಾಗಿ ಬರುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಕೋಟಿಗಟ್ಟಲೆ ಆದಾಯ ತಂದುಕೊಡುವ ಹಾಸನಾಂಬೆಯ ದರ್ಶನಕ್ಕೆ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿರುವುದು ವಿಪರ್ಯಾಸ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments