Webdunia - Bharat's app for daily news and videos

Install App

ತಟಸ್ಥ ನಿಲುವಿನ ನಾಯಕರಿಗೆ ಬಿಎಸ್‌ವೈ ಕುಟುಂಬದ ಮೇಲೆ ಆಕ್ರೋಶವಿದೆ: ಬಸನಗೌಡ ಪಾಟೀಲ್

Sampriya
ಬುಧವಾರ, 4 ಡಿಸೆಂಬರ್ 2024 (17:27 IST)
ನವದೆಹಲಿ: ಕರ್ನಾಟಕ ಬಿಜೆಪಿಯಲ್ಲಿ ಆಗುತ್ತಿರುವ ಬಣ ಬಡಿದಾಟವನ್ನು ನಿಲ್ಲಿಸಲು ವರಿಷ್ಠರು ಹರಸಾಹಸ ಪಡುತ್ತಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಅವರು ಇದೀಗ ದೆಹಲಿಗೆ ತೆರಳಿದ್ದಾರೆ.

ಭೇಟಿಗೂ ಮುನ್ನಾ ಮಾತನಾಡಿದ ಅವರು,  ತಟಸ್ಥ ನಿಲುವಿನ ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಕುಟುಂಬದ ಮೇಲೆ ಆಕ್ರೋಶ ಇದೆ. ಆರು ಪೇಜ್ ಉತ್ತರ ತಯಾರು ಮಾಡಿದ್ದೇನೆ. ಅದನ್ನು ನೀಡುತ್ತೇನೆ. ಜೊತೆಗೆ ವಿವರಣೆ ಕೊಡುತ್ತೇನೆ. ಪಕ್ಷದಲ್ಲಿ ತಟಸ್ಥ ನಿಲುವು ಹೊಂದಿರುವ ನಾಯಕರು ಇದ್ದಾರೆ. ಅವರಿಗೆ ಯಡಿಯೂರಪ್ಪ ಕುಟುಂಬದ ಮೇಲೆ ಆಕ್ರೋಶ ಇದೆ. ಅವರು ಬಹಿರಂಗವಾಗಿ ಮಾತನಾಡುತ್ತಿಲ್ಲ ಎಂದರು.

ಭ್ರಷ್ಟಾಚಾರ ಕುಟುಂಬದ ಕಪಿಮುಷ್ಠಿಯಿಂದ ಹೊರ ಬರಬೇಕು ಎನ್ನುವ ಭಾವನೆ ಎಲ್ಲರಲ್ಲಿ ಇದೆ. ಕೆಲವರು ತಟಸ್ಥ ನಿಲುವು ಹೊಂದಿದ್ದಾರೆ. ಯಾವ ಕಡೆಗೂ ವಾಲದ ರಾಷ್ಟ್ರೀಯ ನಾಯಕರನ್ನು ಕಳುಹಿಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮಾಹಿತಿ ಕಲೆಹಾಕಬೇಕು ಎಂದರು.

ವಿಜಯೇಂದ್ರ ಅವರು ಟೀಂ ಮಾಡಿಕೊಂಡು ನಿಷ್ಠಾವಂತ ಕಾರ್ಯಕರ್ತರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ನಾನು ಬರೆದ ಪತ್ರದಲ್ಲಿ ಹೊಂದಾಣಿಕೆ ರಾಜಕೀಯ, ಕುಟುಂಬ ರಾಜಕೀಯ, ಹಿಂದುತ್ವದಲ್ಲಿ ಹೇಗೆ ರಾಜೀ ಆಗಿದೆ ಇರಬೇಕು ಎಂಬ ವಿಚಾರವನ್ನು ಬರೆದಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments