ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

Sampriya
ಭಾನುವಾರ, 19 ಅಕ್ಟೋಬರ್ 2025 (17:59 IST)
ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿ ಬೆಳೆದವರು ಇಂದು ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಟೀಕೆಗಾರರಿಗೆ ಪರೋಕ್ಷವಾಗಿ ಕೌಂಟರ್ ನೀಡಿದರು. 

ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ನಡಿಗೆ: ಅಭಿಯಾನದಲ್ಲಿ ‘ನಾಗರಿಕರೊಂದಿಗೆ ಸಂವಾದ’ ನಡೆಸಿ, ಅಹವಾಲುಗಳನ್ನು ಆಲಿಸಿ‌ ಮಾತನಾಡಿದರು.

ಬೆಂಗಳೂರಿಗೆ ಬಂದು ಬೆಳೆದಿರುವವರು ಈ ಹಿಂದೆ ಹೇಗಿದ್ದರು, ಪ್ರಸ್ತುತ ಹೇಗಿದ್ದಾರೆ ಎಂಬುದನ್ನಲ್ಲೆ ಮರೆತು ಇದೀಗ ಟ್ವೀಟ್‌ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾವು ಬಂದಿರುವ ಮೂಲವನ್ನು ಮರೆಯಬಾರದು ಎಂದು ಹೆಸರು ಹೇಳದೇ ಪ್ರತಿಕ್ರಿಯಿಸಿದ್ದಾರೆ. 

ಇನ್ನೂ ದೇಶದಲ್ಲಿಯೇ ಮೊದಲ ಬಾರಿಗೆ ನಗರದಾದ್ಯಂತ ‌ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ‌ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ‌ ಗಮನಕ್ಕೆ ತರುವ ವ್ಯವಸ್ಥೆಯನ್ನು ಮಾಡಿದ್ದೇವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments