ಬಿಜೆಪಿ ಸರ್ಕಾರದ ವಿರುದ್ಧ ಜಾರಕಿಹೊಳಿ ಸಿಡಿಸಿದ್ರು ಹೊಸ ಬಾಂಬ್

Webdunia
ಮಂಗಳವಾರ, 17 ಸೆಪ್ಟಂಬರ್ 2019 (16:36 IST)
ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಜಾರಕಿಹೊಳಿ ಫುಲ್ ಗರಂ ಆಗಿದ್ದಾರೆ.

ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸರ್ಕಾರ ಗಮನ ಸೆಳೆಯಲು ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು, ನಿರಾಶ್ರಿತರ ಜತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿ, ರಾಜ್ಯ ಸರಕಾರ ಸಂತ್ರಸ್ತರಿಗೆ ಕೇವಲ 10 ಸಾವಿರ ಕೊಟ್ಟು ಕೈಕಟ್ಟಿ ಕುಳಿತಿದೆ. ಬಾಡಿಗೆ, ಶೆಡ್ ನಿರ್ಮಾಣ ಮತ್ತು ಮನೆ ನಿರ್ಮಾಣಗಳಿಗೆ 5 ಲಕ್ಷ ಘೋಷಣೆಯ ಭರವಸೆ ಹುಸಿಯಾದಂತಿದೆ. ಇದರ ಬಗ್ಗೆ ಇನ್ನೂವರೆಗೂ ಯಾವುದೇ ಕ್ರಮ ಕೈಗೆತ್ತಿಕೊಂಡಿಲ್ಲ. ಇನ್ನು ಬೆಳೆ ಹಾನಿಗೆ ಅಲ್ಪ ಪರಿಹಾರ ಘೋಷಿಸಿದ್ದಾರೆ. ಆದರೆ ಸಮೀಕ್ಷೆಯೇ ನಡೆದಿಲ್ಲ.

ಈ ಸರ್ಕಾರ ಜನರ ಪರ ನಿಲ್ಲುವ ಬಗ್ಗೆ ನಮಗೆ ಅನುಮಾನವಿದೆ ಎಂದ್ರು. ಕಳೆದ ಬಾರಿಯೂ ಬಿಜೆಪಿ ಸರಕಾರವಿದ್ದಾಗ ಕೇಂದ್ರದ ಗಮನ ಸೆಳೆಯುವಲ್ಲಿ ಸಂಸದರು ವಿಫಲರಾಗಿದ್ದರು. ಈ ಬಾರಿ 26 ಜನ ಸಂಸದರಿದ್ದರೂ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರುವಲ್ಲಿ ವಿಫಲರಾಗಿದ್ದಾರೆ.

ರಾಜ್ಯದಲ್ಲಿ- ಕೇಂದ್ರದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ಧಿ ಯಾಗುತ್ತದೆ ಎನ್ನುವುದು ಎಲ್ಲರ ಭ್ರಮೆಯಿತ್ತು. ಇದೀಗ ಅದು ಹುಸಿಯಾಗಿದೆ. ಇದೀಗ ಸರಕಾರ ಗಮನ ಸೆಳೆಯಲು ಕಾಂಗ್ರೆಸ್ ಪಕ್ಷ ಮುಂದಾಗಲಿದ್ದು ಪ್ರತಿಭಟನೆ ಮಾಡಲಿದ್ದೇವೆ ಎಂದ್ರು.  

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಮುಂದಿನ ಸುದ್ದಿ
Show comments