Webdunia - Bharat's app for daily news and videos

Install App

ಕರ್ನಾಟಕ ಹೈಕೋರ್ಟ್‌ಗೆ ಹೊಸ ಸಿಜೆ

Webdunia
ಭಾನುವಾರ, 10 ಅಕ್ಟೋಬರ್ 2021 (12:01 IST)
ಬೆಂಗಳೂರು : ಕರ್ನಾಟಕ ಹೈಕೋರ್ಟ್ಗೆ ಮುಖ್ಯನ್ಯಾಯಮೂರ್ತಿಗಳನ್ನಾಗಿ ರಿತುರಾಜ್ ಅವಸ್ಥಿ ಅವರನ್ನು ನೇಮಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಸತೀಶ್ ಚಂದ್ರ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.
ರಿತುರಾಜ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. 1960ರಲ್ಲಿ ಹುಟ್ಟಿರುವ ನ್ಯಾ.ರಿತುರಾಜ್ ಅವರು, ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿದ್ದು, 1987ರಿಂದ ವಕೀಲಿ ವೃತ್ತಿ ಕೈಗೊಂಡಿದ್ದರು. ಅಲಹಬಾದ್ ಹೈಕೋರ್ಟ್ನ ಲಖನೌ ಪೀಠದಿಂದ ಇವರು ವೃತ್ತಿ ಆರಂಭಿಸಿದ್ದಾರೆ. 2009ರಲ್ಲಿ ಲಖನೌ ಪೀಠದಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡು 2010ರಲ್ಲಿ ಕಾಯಂ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದಾರೆ.
ಇದೇ ವೇಳೆ ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಸೇರಿದಂತೆ ಇದೇ ವೇಳೆ ದೇಶದ 8 ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿ ನಡೆದಿದೆ.
ಉಳಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರು:
ಅಲಹಾಬಾದ್- ನ್ಯಾ.ರಾಜೇಶ್ ಬಿಂದಾಲ್
ಮೇಘಾಲಯ- ನ್ಯಾ.ರಂಜಿತ್ ವಿ. ಮೊರೆ
ಕೋಲ್ಕತಾ- ನ್ಯಾ.ಪ್ರಕಾಶ್ ಶ್ರೀವಾಸ್ತವ
ಮಧ್ಯಪ್ರದೇಶ- ನ್ಯಾ. ಆರ್.ವಿ. ಮಳೀಮಠ
ಆಂಧ್ರಪ್ರದೇಶ- ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments