Webdunia - Bharat's app for daily news and videos

Install App

ರಾಯಪುರ ಅಧಿವೇಶನ ‘ಕೈ’ಗೆ ಹೊಸ ದಿಕ್ಕು - ಡಿಕೆಶಿ ವ್ಯಂಗ್ಯ

Webdunia
ಸೋಮವಾರ, 27 ಫೆಬ್ರವರಿ 2023 (17:38 IST)
ಛತ್ತೀಸ್‌ಗಡದ ರಾಯಪುರದಲ್ಲಿ ನಡೆದ ಅಧಿವೇಶನ ಕಾಂಗ್ರೆಸ್‌ಗೆ ಹೊಸ ದಿಕ್ಕು ಸಿಕ್ಕಂತಾಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್‌ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆಶಿ, ರಾಯಪುರ ಅಧಿವೇಶನ ಹೊಸ ದಿಕ್ಕು ಕೊಡ್ತಾ ಇದೆ. ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಹೇಗೆ ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು. 2024ರ ಚುನಾವಣೆಗೆ ಹೇಗೆ ತಯಾರಿ ಆಗಬೇಕು? ಭಾರತ ಜೋಡೋ ವೇಳೆ ತೆಗೆದುಕೊಂಡ ತೀರ್ಮಾನ ಅನುಷ್ಠಾನ ಮಾಡುವುದು ಹೇಗೆ ಎಂಬ ವಿಚಾರಗಳು ರಾಯಪುರದ ಅಧಿವೇಶದಲ್ಲಿ ಚರ್ಚೆ ಆಗಿವೆ ಎಂದು ಮಾಹಿತಿ ನೀಡಿದರು. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಆಡಳಿತ ಮಾಡುವುದು ನಾವು. ಹಾಗಾಗಿ ನಾವು ಪ್ರಚಾರಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬಂದು ಆಡಳಿತ ಮಾಡಲ್ಲ. ಮೋದಿ, ಅಮಿತ್‌ ಶಾ ಪಂಚಾಯಿತಿ, ತಾಲೂಕು, ಜಿಲ್ಲೆ ಪ್ರಚಾರಕ್ಕೆ ಬಂದು ಹೋಗಲಿ ಎಂದು ತಿರುಗೇಟು ನೀಡಿದರು. ರಾಜ್ಯಕ್ಕೆ ಬಿಜೆಪಿ ನಾಯಕರ ನಿರಂತರ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಬಲ್ ಇಂಜಿನ್ ಇದೆ, ಎಲ್ಲಿ ಬೇಕಾದ್ರು ಗಾಡಿ ಓಡಿಸಲಿ ಎಂದು ಪದೇ ಪದೆ ಮೋದಿ, ಅಮಿತ್ ಶಾ‌ ರಾಜ್ಯಕ್ಕೆ ಬರ್ತಾ ಇರೋದಕ್ಕೆ ಡಿಕೆಶಿ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments