Webdunia - Bharat's app for daily news and videos

Install App

ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದ ನೂತನ ಗೃಹಮಂತ್ರಿ

Webdunia
ಶನಿವಾರ, 31 ಆಗಸ್ಟ್ 2019 (12:53 IST)
ಬೆಂಗಳೂರು : ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನಲೆಯಲ್ಲಿ ಇದೀಗ ನೂತನ ಬಿಜೆಪಿ ಸರ್ಕಾರದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ತಮಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದು ಹೇಳಿ ಟ್ವೀಟ್ ಮಾಡಿದ್ದಾರೆ.




ರಾಜ್ಯದಲ್ಲಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಲಾಗುತ್ತದೆ. ಆದರೆ ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಡಿಸಿಎಂ ಅಶ್ವಥ್​ ನಾರಾಯಣ ಕೂಡ ತಮಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದು ಹೇಳಿದ್ದರು.


ಇದೀಗ ಬಿಜೆಪಿ ಸರ್ಕಾರದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ, ‘ಪೊಲೀಸ್​ ಇಲಾಖೆ ನನಗೆ ನೀಡಿದ ಝೀರೋ ಟ್ರಾಫಿಕ್​ನಿಂದ ಸಾಮಾನ್ಯ ಜನರಿಗೆ ತೊಂದರೆಗಳಾಗಿದ್ದು ಕಂಡುಬಂದಿದೆ. ಈ ಕುರಿತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ನಾನು ಹೋಗುವ ಮಾರ್ಗದಲ್ಲಿ ಇನ್ನುಮುಂದೆ ಝೀರೋ ಟ್ರಾಫಿಕ್ ನೀಡಬೇಡಿ ಹಾಗೂ ಪ್ರತಿಬಾರಿ ಭೇಟಿ ನೀಡಿದಾಗ ಇಲಾಖೆಯಿಂದ ನೀಡುವ ಗಾರ್ಡ್​ ಆಫ್​ ಹಾನರ್ ಬೇಡವೆಂದು ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments