Webdunia - Bharat's app for daily news and videos

Install App

ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ: ಆನಂದ್ ಸಿಂಗ್ ಬಾಂಬ್!

Webdunia
ಶನಿವಾರ, 7 ಆಗಸ್ಟ್ 2021 (15:00 IST)
ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು. ಬದಲಾವಣೆ ಮಾಡಬೇಕೆಂದು ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ಕೇಳಿದ್ದೆ. ಕೇಳಿದ ಖಾತೆ ಕೊಡದೇ ಇದ್ದರೆ ಶಾಸಕನಾಗಿ ಉಳಿಯೋದೇ ಒಳಿತು ಎನ್ನುವದು ನನ್ನ ನಿಲುವು ಎಂದರು.
ಬಿಜೆಪಿ ಸರ್ಕಾರ ಬರಲು ಮೊದಲು ರಾಜೀನಾಮೆ ನೀಡಿದ್ದು ನಾನು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಮೇ ಒಂದನೇ ತಾರೀಖು ಮೊದಲು ನಾನು ರಾಜೀನಾಮೆ ನೀಡಿದ್ದು. ಹಾಗಂತ ನನ್ನಿಂದಲೇ ಸರ್ಕಾರ ಬಂದಿದೆ ಅಂತ ಹೇಳಲ್ಲ. ನನ್ನಂತೆ ಹಲವು ಜನರು ರಾಜೀನಾಮೆ ನೀಡಿದ ಬಳಿಕ ಸರ್ಕಾರ ರಚನೆ ಯಾಗಿದೆ ಎಂದು ಅವರು ಹೇಳಿದರು.
ಯಡಿಯೂರಪ್ಪ ಸರ್ಕಾರದ ವೇಳೆಯೂ ಎರಡು ದಿನದಲ್ಲಿ ಮೂರು ಖಾತೆ ಬದಲಾಯಿಸಿದರು. ಇದು ಅವಮಾನ ಅಲ್ಲ ಆದರೆ ನಿರಾಸೆ ಮಾಡಿರುವುದಕ್ಕೆ ಸಾಕಷ್ಟು ಬೇಸರವಾಗಿದೆ. ಮತ್ತೊಮ್ಮೆ ಸಿಎಂಗೆ ಮನವಿ ಮಾಡುವೆ ಕೊಡದಿದ್ರೇ ನನ್ನ ದಾರಿ ನಾನು ನೋಡಿಕೊಳ್ಳುವೆ ಎಂದು ಆನಂದ್ ಸಿಂಗ್ ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments