Webdunia - Bharat's app for daily news and videos

Install App

ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ

Webdunia
ಗುರುವಾರ, 22 ಸೆಪ್ಟಂಬರ್ 2022 (21:24 IST)
ಬೆಂಗಳೂರಿನ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿಯ 40% ಸರ್ಕಾರವು ಈಗ ನೂತನ ಪಾರ್ಕಿಂಗ್‌ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, ಭಾನುವಾರವು ರಜಾ ದಿನವಾಗಿದ್ದರೂ ಕೂಡ ಸೆಪ್ಟೆಂಬರ್‌ 18ರ ಭಾನುವಾರದಂದು ಟೆಂಡರ್‌ಗೆ ಆಹ್ವಾನ ಕರೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್‌ಗೆ 40 ದಿನಗಳ ಕಾಲಾವಕಾಶ ನೀಡಬೇಕಾಗಿದ್ದರೂ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವನಿಗದಿ ಮಾಡಿಕೊಂಡಿದ್ದು, ಕೇವಲ ನಾಮಕಾವಸ್ತೆಗಾಗಿ ಟೆಂಡರ್‌ ಕರೆಯಲಾಗಿದೆ ಎಂದು ಆರೋಪಿಸಿದರು.
 
ಆಮ್‌ ಆದ್ಮಿ ಪಾರ್ಟಿಯ  ಪಾರ್ಕಿಂಗ್‌ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನರು ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರವು ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ. ವರ್ಷಕ್ಕೆ ಸುಮಾರು 200 ಕೋಟಿ ರೂಪಾಯಿಯನ್ನು ಈ ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಾಮೀಷ ಎಣಿಸುವ ಜನವಿರೋಧಿ ಸರ್ಕಾರವು ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments