Select Your Language

Notifications

webdunia
webdunia
webdunia
webdunia

ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ?

ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ?
ಕೊಪ್ಪಳ , ಬುಧವಾರ, 21 ಡಿಸೆಂಬರ್ 2022 (10:52 IST)
ಕೊಪ್ಪಳ : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಡಿ.25ರಂದು ಹೊಸ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಸುಳಿವು ನೀಡಿರುವ ಅವರು, ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮುಂದಿನ ವಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಡಿ.25ರಂದು ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ಕರೆದಿದ್ದಾರೆ. ಒಂದು ವಾರದ ವಿಶ್ರಾಂತಿ ಬಳಿಕ ಮತ್ತೆ ಓಡಾಟ ಶುರು ಮಾಡಿರುವ ರೆಡ್ಡಿ, ತಮ್ಮ ಪ್ರವಾಸದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಡಿ.18 ರಂದು ಗಂಗಾವತಿಯಲ್ಲಿ ಸುದ್ದಿಗೋಷ್ಠಿ ಕರೆಯುವುದಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ತಿಳಿಸಿದ್ದು, ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಇದೀಗ ಸ್ವತಃ ಜನಾರ್ದನ ರೆಡ್ಡಿ ಅವರು ಡಿ.25ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಬಾರೀ ಕುತೂಹಲ ಮೂಡಿಸಿದೆ. 

ತಮ್ಮ 1 ವಾರದ ಪ್ರವಾಸದ ಭಾಗವಾಗಿ ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಗಾಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷ ಘೋಷಣೆಗೂ ಮುನ್ನ ರೆಡ್ಡಿ ರಾಜ್ಯದ ಮಠ-ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯಿಲ್ಲ: ದೇವೇಂದ್ರ ಫಡ್ನವಿಸ್