Webdunia - Bharat's app for daily news and videos

Install App

ಬಸ್ ಓಡಿಸಲು ಸರಕಾರದಿಂದ ಹೊಸ ಪ್ಲ್ಯಾನ್

Webdunia
ಶುಕ್ರವಾರ, 29 ಮೇ 2020 (20:47 IST)
ಸಾರ್ವಜನಿಕರಿಗೆ ಹತ್ತಿರವಾದ ಸಾರಿಗೆ ಇಲಾಖೆ ನಷ್ಟ ಅನುಭವಿಸಿದರೂ, ಸಾರ್ವಜನಿಕ ಸೇವೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ವಾಹನವನ್ನು ಓಡಿಸಲಾಗುತ್ತಿದೆ.

ಲಾಕ್ ಡೌನ್ ಸಂದರ್ಭದಲ್ಲಿ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಹೊಸ ಯೋಜನೆಯೊಂದಿಗೆ ಬಸ್ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಲಾಕ್‍ಡೌನ್ ಅವಧಿ ಮೇ 31 ರಂದು ಕೊನೆಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಬಸ್ ಸಂಚಾರ, ಪ್ರಯಾಣಿಕರ ಸಂಖ್ಯೆ ಕುರಿತಂತೆ ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿ ಪ್ರಕಟವಾದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ವೆಚ್ಚದಲ್ಲಿ ಕಡಿಮೆ, ಆದಾಯ ಸೋರಿಕೆ ಕಡಿಮೆ ಮಾಡುವುದು, ನಿರ್ವಹಣೆಯ ವೆಚ್ಚ ಕಡಿತ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ. ಈ ಕಾರ್ಯದಲ್ಲಿ ಸಾರಿಗೆ ಇಲಾಖೆಯ ಎಲ್ಲ ಅಧಿಕಾರಿಗಳು ಸಿಬ್ಬಂದಿಗಳು ಸಹಕರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments