Publish Date: Tue, 23 Nov 2021 (17:59 IST)
Updated Date: Tue, 23 Nov 2021 (18:03 IST)
ಎರಡು ಗಂಟೆ ಅವಧಿಯಲ್ಲಿ 138 ಮಿಮಿ ಮಳೆ ಬಿದ್ದಿದೆ, ಗ್ರಾಮೀಣ ಪ್ರದೇಶ, ಯಲಹಂಕ ಸೇರಿದಂತೆ ನಗರ ಪ್ರದೇಶಗಳಲ್ಲಿ ಏಕರೀತಿಯಲ್ಲಿ ಮಳೆ ಬಂದಿದೆ. ಎಲ್ಲಾ ಕೆರೆಗಳು ತುಂಬಿವೆ. ಮೇಲ್ಭಾಗದಲ್ಲಿರುವ ಕೆರೆಗಳು ಮತ್ತು ಚರಂಡಿಗಳನ್ನು ಬೇರೆ ದಿಕ್ಕಿಗೆ ತಿರುಗಿಸಲು ಸೂಚನೆ ನೀಡಲಾಗಿದೆ. ಈ ಬಾರಿಯ ಮಳೆ ರಾಜಕಾಲುವೆಯನ್ನೂ ಮೀರಿ ಹರಿದಿರುವ ದೊಡ್ಡ ಪ್ರಮಾಣದ ಅಕಾಲಿಕ ಮಳೆ. ಯಲಹಂಕದಿಂದ ಜಕ್ಕೂರು, ರಾಚೇನಹಳ್ಳಿ ಕೆರೆ, ನಂತರ ಕಡೆ ಆರ್ ಪುರ ದಿಂದ ಪಿನಾಕಿನಿ ನದಿಗೆ ಸೇರಿ ತಮಿಳುನಾಡಿಗೆ ಹೋಗುವ ಕಾಲುವೆ 8 ರಿಂದ 10 ಅಡಿಮಾತ್ರ ಅಗಲವಿದ್ದು ಬಹಳ ಚಿಕ್ಕದಾಗಿದೆ. ಈ ಕೂಡಲೇ ನೀರು ನುಗ್ಗಿದ ಮನೆ, ವಸತಿ ಸಂಕೀರ್ಣ, ಸಂಸ್ಥೆಗಳಲ್ಲಿಯೂ ಡೈವರ್ಷನ್ ಗೆ ಕ್ರಮ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಮಾನ್ಯತಾ ಟೆಕ್ ಪಾರ್ಕ್ ಒಂದು ಪ್ರತಿಷ್ಠಿತ ಸಂಕೀರ್ಣ. ಇಲ್ಲಿರುವ ಆಂತರಿಕ ಚರಂಡಿ ವ್ಯವಸ್ಥೆಯಿಂದ ನೀರು ವಾಪಸ್ಸು ಬರುತ್ತಿದೆ. ಬಾಹ್ಯ ಹಾಗೂ ಆಂತರಿಕ ಚರಂಡಿ ವ್ಯವಸ್ಥೆಯನ್ನು ಪರಸ್ಪರ ಸಹಕಾರದಿಂದ ಸರಿಪಡಿಸಲಾಗುವುದು. ಇಲ್ಲಿ ಕೆಲಸ ಮಾಡುವ ನೌಕರರಿಗೆ ಯಾವುದೇ ತೊಂದರೆಯಾಗದಂತೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.